ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…