ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…