ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು.
ಚೆಸ್ ಪಂದ್ಯಾಟವನ್ನು ದೀಪಬೆಳಗಿ ಉದ್ಘಾಟಿಸಿದ
ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಶ್ರೀಯಾನ್,
ಚೆಸ್ ಬಹು ಜಾಣ್ಮೆಯ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಜಾಣ್ಮೆಯ ಚುರುಕುತನ ಸಾಧ್ಯ ಎಂದರು.
ಅತಿಥಿಯಾಗಿದ್ದ, ಕಂಕನಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಡಾ.ರೋಶನ್ ಮಾತನಾಡಿ,ಚೆಸ್ ಮೂಲಕ ನಮ್ಮ ಬೌದ್ಧಿಕ ಮಟ್ಟ ಏರಿಕೆಯಾಗಲು ಸಾಧ್ಯವಿದೆ. ಈ ಸ್ಫರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ, ಸುನಿಲ್ ಆಚಾರ್ ಮಾತನಾಡಿ, ತಾಳ್ಮೆಯ ಹೆಚ್ಚಿಸುವಿಕೆಗೆ ಚೆಸ್ ಅಗತ್ಯವಿದೆ. ಈಗಿನ ಬದುಕಿಗೆ ತಾಳ್ಮೆ ಅಗತ್ಯವೂ ಇದೆ.ಇಂದು ಚೆಸ್ ಜನಪ್ರಿಯ ವಾಗುತ್ತಿದೆ ಎಂದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ ಕಮಿಲ, ಕೊಶಾಧಿಕಾರಿ ಪೂರ್ಣಿಮ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ ಸ್ವಾಗತಿಸಿದರು. ಕಾರ್ಯದರ್ಶಿ ವಾಣಿ ವಂದಿಸಿದರು.
ದಕ್ಷಿಣ ಕನ್ನಡ,ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…