ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು.
ಚೆಸ್ ಪಂದ್ಯಾಟವನ್ನು ದೀಪಬೆಳಗಿ ಉದ್ಘಾಟಿಸಿದ
ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಶ್ರೀಯಾನ್,
ಚೆಸ್ ಬಹು ಜಾಣ್ಮೆಯ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಜಾಣ್ಮೆಯ ಚುರುಕುತನ ಸಾಧ್ಯ ಎಂದರು.
ಅತಿಥಿಯಾಗಿದ್ದ, ಕಂಕನಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಡಾ.ರೋಶನ್ ಮಾತನಾಡಿ,ಚೆಸ್ ಮೂಲಕ ನಮ್ಮ ಬೌದ್ಧಿಕ ಮಟ್ಟ ಏರಿಕೆಯಾಗಲು ಸಾಧ್ಯವಿದೆ. ಈ ಸ್ಫರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ, ಸುನಿಲ್ ಆಚಾರ್ ಮಾತನಾಡಿ, ತಾಳ್ಮೆಯ ಹೆಚ್ಚಿಸುವಿಕೆಗೆ ಚೆಸ್ ಅಗತ್ಯವಿದೆ. ಈಗಿನ ಬದುಕಿಗೆ ತಾಳ್ಮೆ ಅಗತ್ಯವೂ ಇದೆ.ಇಂದು ಚೆಸ್ ಜನಪ್ರಿಯ ವಾಗುತ್ತಿದೆ ಎಂದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ ಕಮಿಲ, ಕೊಶಾಧಿಕಾರಿ ಪೂರ್ಣಿಮ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ ಸ್ವಾಗತಿಸಿದರು. ಕಾರ್ಯದರ್ಶಿ ವಾಣಿ ವಂದಿಸಿದರು.
ದಕ್ಷಿಣ ಕನ್ನಡ,ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದರು.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…