ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು.
ಚೆಸ್ ಪಂದ್ಯಾಟವನ್ನು ದೀಪಬೆಳಗಿ ಉದ್ಘಾಟಿಸಿದ
ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಶ್ರೀಯಾನ್,
ಚೆಸ್ ಬಹು ಜಾಣ್ಮೆಯ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಜಾಣ್ಮೆಯ ಚುರುಕುತನ ಸಾಧ್ಯ ಎಂದರು.
ಅತಿಥಿಯಾಗಿದ್ದ, ಕಂಕನಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಡಾ.ರೋಶನ್ ಮಾತನಾಡಿ,ಚೆಸ್ ಮೂಲಕ ನಮ್ಮ ಬೌದ್ಧಿಕ ಮಟ್ಟ ಏರಿಕೆಯಾಗಲು ಸಾಧ್ಯವಿದೆ. ಈ ಸ್ಫರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ, ಸುನಿಲ್ ಆಚಾರ್ ಮಾತನಾಡಿ, ತಾಳ್ಮೆಯ ಹೆಚ್ಚಿಸುವಿಕೆಗೆ ಚೆಸ್ ಅಗತ್ಯವಿದೆ. ಈಗಿನ ಬದುಕಿಗೆ ತಾಳ್ಮೆ ಅಗತ್ಯವೂ ಇದೆ.ಇಂದು ಚೆಸ್ ಜನಪ್ರಿಯ ವಾಗುತ್ತಿದೆ ಎಂದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ ಕಮಿಲ, ಕೊಶಾಧಿಕಾರಿ ಪೂರ್ಣಿಮ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ ಸ್ವಾಗತಿಸಿದರು. ಕಾರ್ಯದರ್ಶಿ ವಾಣಿ ವಂದಿಸಿದರು.
ದಕ್ಷಿಣ ಕನ್ನಡ,ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದರು.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…