Advertisement
ಸುದ್ದಿಗಳು

#ChessWorldCup | ಭಾರತದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಗೆ ವಿರೋಚಿತ ಸೋಲು | ಮ್ಯಾಗ್ನಸ್ ಕಾರ್ಲ್​ಸೆನ್ ವಿಶ್ವ ಚಾಂಪಿಯನ್​ |

Share

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.

ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ನಾರ್ವೆಯ ಕಾರ್ಲ್​ಸೆನ್ ಜೊತೆ ಸೆಣಸಾಡಿದ್ದರು. ಆರಂಭದಲ್ಲಿಯೇ ಕಾರ್ಲ್​ಸೆನ್ ಅವರನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಬುಧವಾರ ನಡೆದ  ಗೇಮ್​ನಲ್ಲಿ  ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್​ನತ್ತ ಸಾಗಿತ್ತು.

ಗುರುವಾರ ನಡೆದ ಟೈಬ್ರೇಕ್​ನ ಮೊದಲ ಸುತ್ತಿನ ಗೇಮ್​ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು. ಟೈಬ್ರೇಕ್​ನ 2ನೇ ಗೇಮ್​ ಅನ್ನು ಆರಂಭಿಸಿದ್ದ ಪ್ರಜ್ಞಾನಂದ ಪ್ರಾರಂಭದಲ್ಲೇ ಹಿನ್ನಡೆ ಅನುಭವಿಸಿದರು. ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಾರ್ಲ್​​ಸೆನ್ ಮ್ಯಾಚ್​ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 1-0 ಅಂತರದಿಂದ ಜಯ ಸಾಧಿಸಿ ಕಾರ್ಲ್​ಸೆನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

9 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

9 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

11 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

14 hours ago