Advertisement
ಸುದ್ದಿಗಳು

ವಿವೇಕಾನಂದದಲ್ಲಿ 41ನೇ ಮಾನ್ಸೂನ್ ಚೆಸ್ ಟೂರ್ನ್‍ಮೆಂಟ್ | ಚದುರಂಗ ಉತ್ತಮ ಜೀವನ ಶೈಲಿಯನ್ನು ರೂಪಿಸುತ್ತದೆ | ಸುದರ್ಶನ್ ಕುಮಾರ್

Share

ಚದುರಂಗ ಆಟ ಹಾಗೂ ಮಾನವನ ಜೀವನ ಶೈಲಿಗೆ ತುಂಬಾ ಹೋಲಿಕೆ ಇದೆ. ಒಮ್ಮೆ ಚದುರಂಗ ಆಡಲು ಆರಂಭಿಸಿದರೆ, ಉತ್ತಮ ಜೀವನ ಶೈಲಿಯನ್ನು ಚದುರಂಗ ಆಟವೇ ರೂಪಿಸುತ್ತದೆ. ಚದುರಂಗದಲ್ಲಿ ರಾಜನ ಪಾತ್ರ ಪ್ರಮುಖವಾಗಿದ್ದರೂ ಕೂಡಾ ರಾಣಿಯ ಪಾತ್ರವು ಜೊತೆಗಿದ್ದರೆ ಹೆಚ್ಚು ಬಲ. ಅಂತೆಯೇ ನಮ್ಮ ಜೀವನದಲ್ಲಿಯೂ ಪುರುಷರ ಪ್ರತಿಯೊಂದು ಯಶಸ್ಸಿನ ಹಿಂದೆಯೂ ಮಹಿಳೆಯರು ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಸುದರ್ಶನ್ ಕುಮಾರ್ ಹೇಳಿದರು.

Advertisement
Advertisement
Advertisement
Advertisement
ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ 41ನೇ ಮಾನ್ಸೂನ್ ಚೆಸ್ ಟೂರ್ನ್‍ಮೆಂಟ್ ನ್ನು ಉದ್ಘಾಟಿಸಿ ಮಾತನಾಡಿದರು. ಚದುರಂಗ ಸ್ಫರ್ಧೆಯು ನಮ್ಮೊಳಗೆ ಏಕಾಗ್ರತೆಯನ್ನು ಹೆಚ್ಚಿಸಲು ಬಹಳಷ್ಟು ಸಹಾಯವಾಗುತ್ತದೆ. ಹಾಗಾಗಿ ಕ್ರೀಡಾಳುಗಳು ನಿತ್ಯವೂ ಚೆಸ್ ಆಡಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿ ಶ್ರೀನಿವಾಸ ಸಾಮಂತ, ಚದುರಂಗದ ಆಟಕ್ಕೆ ತನ್ನದೇ ಆದ ಇತಿಹಾಸವಿದೆ. ಪ್ರಾಚೀನ ಕಾಲದಲ್ಲಿ ರಾಜರುಗಳು ಸೇರಿಕೊಂಡು ಆಟವನ್ನು ಆಡುತ್ತಿದ್ದರು. ನಂತರ ಅಂತರಾಷ್ಟ್ರೀಯ ಚೆಸ್‍ಪಟು ವಿಶ್ವನಾಥ್ ಆನಂದ್‍ರಿಂದಾಗಿ ಈ ಆಟವು ಮತ್ತಷ್ಟು ಪ್ರಚಲಿತವಾಯಿತು. ಪ್ರಸ್ತುತ ಭಾರತ ದೇಶಕ್ಕೆ ಚೆಸ್ ಕ್ರೀಡೆಯಲ್ಲಿ ನಾಲ್ಕನೇಯ ಸ್ಥಾನಮಾನವನ್ನು ಗಳಿಸಿದೆ. ವಿದ್ಯಾರ್ಥಿಗಳು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಟವನ್ನು ಆಡಿ ದೇಶವನ್ನು ಮೊದಲನೇ ಸ್ಥಾನಕ್ಕೆ ತರಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ಚದುರಂಗದ ಆಟವನ್ನು ಆಡುತ್ತಿದ್ದಂತೆ ಏಕಾಗ್ರತೆಯು ಹೆಚ್ಚುತ್ತದೆ ಮತ್ತು ಇದು ಒಂದು ಮೆದುಳಿನ ಆಟವೆಂದೇ ಹೇಳಬಹುದು ಎಂದರು.

Advertisement
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಪ್ರೋ.ಶಿವಪ್ರಸಾದ್ ಕೆ.ಎಸ್, ಹಾಗೂ ಮಂಗಳೂರಿನ ಡೆರಿಕ್ ಚೆಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡೆರಿಕ್ ಪಿಂಟೋ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪ್ರಾರ್ಥಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಡಾ. ಜ್ಯೋತಿ ಕುಮಾರಿ ವಂದಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago