Advertisement
Opinion

ಕೋಳಿಗಳಿಗೆ ಮಳೆಗಾಲದಲ್ಲಿ ಕಾಡುವ ಕೋಳಿ ಹೇನು | ಈ ಸಮಸ್ಯೆ ತಡೆಯಲು ಇಲ್ಲಿದೆ ಸುಲಭ ಪರಿಹಾರ

Share

ಕೇವಲ ಕೃಷಿಯನ್ನು ಮಾತ್ರ ನಂಬದೆ ಅನೇಕ ರೈತರು ಕೋಳಿ ಸಾಕಾಣಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.  ಕೃಷಿಯಲ್ಲಿ ಯಾವುದು ಸುಲಭವಲ್ಲ. ಕಾರಣ ನಾವು ಮಾಡುವ ಕೆಲಸದಲ್ಲಿ ನೂರೆಂಟು ವಿಘ್ನಗಳು ಬರುತ್ತವೆ. ಅದೇ ರೀತಿ ಕೋಳಿ ಸಾಕಾಣಿಕೆ ಕೂಡ. ನೋಡುಗರಿಗೆ ಇದು ಸುಲಭದ ಕೆಲಸ ಅನ್ನಿಸಬಹುದು. ಲಾಭ ಜಾಸ್ತಿ ಬರುತ್ತೆ ಎಂದು ಅಂದುಕೊಳ್ಳುತ್ತಾರೆ. ಆದರೆ ಅದರಲ್ಲಿರುವ ಸವಾಲುಗಳು, ಕಷ್ಟಗಳು ಅದರ ಕೆಲಸಕ್ಕೆ ಇಳಿದವರಿಗೆ ಮಾತ್ರ ತಿಳಿಯುತ್ತದೆ.

ಕೋಳಿ ಸಾಕಾಣಿಕೆ ಈಗ ಬಹದೊಡ್ಡ ಉದ್ಯಮವಾಗಿ ಬೆಳೆದಿದೆ. ಆದರೆ ಅದನ್ನು ಸಾಕುವ ಕ್ರಮ, ಅದರ ಆಹಾರ, ಅದಕ್ಕೆ ಬರುವ ರೋಗಗಳ ಬಗ್ಗೆ ತೀವ್ರ ನಿಗ ಇಡಬೇಕಾಗುತ್ತದೆ. ಹೌದು ಈ ಕೋಳಿಗಳಿಗೆ ಅದರಲ್ಲೂ ಈ ಮಳೆಗಾಲದಲ್ಲಿ ಭಯಾನಕವಾಗಿ ಕಾಡುವುದು ಕೋಳಿ ಹೇನು. ಇದನ್ನು ನಿರ್ಮಮೂಲನೇ ಮಾಡಲು ಹರಸಾಹಸವೇ ಪಡಬೇಕಾಗುತ್ತದೆ. ಕೋಳಿ ಹೇನು(chicken Lice) ಮಳೆಗಾಲದಲ್ಲಿ ಮತ್ತು ಅತೀ ಹೆಚ್ಚು ತೇವಾಂಶ ಇರುವ ಗೂಡುಗಳಿದ್ದರೆ ಅದರ ಕಾಟ ಹೆಚ್ಚಿರುತ್ತದೆ. ಅದಕ್ಕೆ ಪರಿಣಾಮಕಾರಿಯಾಗಿ ಔಷಧ ಮಾಡಿದರೆ ಮಾತ್ರ ಅದರಿಂದ ಮುಕ್ತಿ ಸಿಗಬಹುದು. ಇದಕ್ಕೆ ಒಳ್ಳೆಯ ಪರಿಣಾಮಕಾರಿ ಮದ್ದು ಎಂದರೆ ಸೆವಿನ್ ಹೆಸರಿನ ಪೌಡರ್ ಮತ್ತು ಲಿಕ್ವಿಡ್ ಮದ್ದು..

ಇದನ್ನು ಅಂದಾಜು ನೀರಿನಲ್ಲಿ ಮಿಕ್ಸ್ ಮಾಡಿ ರಾತ್ರಿ ವೇಳೆ ಸ್ಪ್ರೇ ಮಾಡಬೇಕು. ಅದು ರಾತ್ರಿ ವೇಳೆಯೇ ಯಾಕೆಂದರೆ ಕೋಳಿಗಳಿಗೆ  ಹಗಲೆಲ್ಲಾ ವಿಪರೀತ ಮೈಕೊಡವಿಕೊಳ್ಳುವ ಅಭ್ಯಾಸ ಇರುತ್ತದೆ. ಆದ್ದರಿಂದ ನೀವು ಸ್ಪ್ರೇ ಮಾಡಿದ ಕೂಡಲೇ ಕೊಡವಿಕೊಳ್ಳುವುದರಿಂದ ಮುದ್ದಿನ ಒಳ್ಳೆಯ ಪರಿಣಾಮ ಬೀರುವುದಿಲ್ಲ.

ಹಾಗಾಗಿ ರಾತ್ರಿ ವೇಳೆಯೇ ಸ್ಪ್ರೇ ಮಾಡಬೇಕು. ಕೋಳಿಗಳ ಮೇಲೆ ಹಾಗೂ ಗೂಡಿನೊಳಗಡೆ ಗೋಡೆಗಳ ಮೇಲೆಯೂ ಸ್ಪ್ರೇ ಮಾಡಬೇಕು. ಸಾಧ್ಯವಾದರೆ ಗೂಡಿನ ಹೊರಗಡೆಯೂ ಬಾಗಿಲಿಗೆ ಮತ್ತು ಸಂದುಗಳಿಗೆ ಸ್ಪ್ರೇ ಮಾಡಬೇಕು. ಇದೇ ರೀತಿಯಲ್ಲಿ ನಿರಂತರ 3 ದಿನ ಒಳ್ಳೆಯ ರೀತಿಯಲ್ಲಿ ಸ್ಪ್ರೇ ಮಾಡಬೇಕು.. ಹೀಗೆ ಮಾಡಿದರೆ ಮಾತ್ರ ನೂರಕ್ಕೆ ನೂರರಷ್ಟು ಫಲಿತಾಂಶ ಸಿಗುತ್ತದೆ..

ಬರಹ :
ಸತೀಶ್‌ ಡಿ ಶೆಟ್ಟಿ
, ಕೋಳಿ ಸಾಕಾಣಿಕೆದಾರರು
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago