ಕಲಬುರ್ಗಿಯಲ್ಲಿ ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಮುಖ್ಯಮಂತ್ರಿ | ಸಮರ್ಪಕ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

September 17, 2025
8:08 PM

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಬುರ್ಗಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದ ಅವರು,  ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿದರು.

ಬೀದರ್, ಕಲ್ಬುರ್ಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.  ದ್ರೋಣ್ ಕ್ಯಾಮರಾ ಮೂಲಕ ಮಾಡಿರುವ ಬೆಳೆ ಹಾನಿ ವೀಡಿಯೊವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತೋರಿಸಿ ವಿವರಿಸಿದರು. ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಫ್ಜಲಪುರ್ ವಿಧಾನಸಭಾ ಕ್ಷೇತ್ರದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು.

ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ. 175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ.‌ ನಿರಂತರ ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿದ್ಧರಾಮಯ್ಯ ಇದೇ ವೇಳೆ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror