ಆರು ತಾಲೂಕು ಹಾಗೂ ಎರಡು ಪಟ್ಟಣ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸುವ ತುಂಗಾಭದ್ರಾ ಕುಡಿಯುವ ನೀರು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. …… ಮುಂದೆ ಓದಿ……
ಪಾವಗಡ ತಾಲ್ಲೂಕಿನಲ್ಲಿ 716 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಫ್ಲೋರೈಡ್ ನೀರು ಕುಡಿಯುವುದರಿಂದ ಆಗುತ್ತಿದ್ದ ಅಂಗವಿಕಲತೆ, ರೋಗಗಳಿಗೆ ತುತ್ತಾಗುತ್ತಿದ್ದ ಜನರಿಗೆ ಇಂದು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಪಾವಗಡ ತಾಲ್ಲೂಕಿನಲ್ಲಿ 270 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದರು. 2529 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, 716 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದೆವೆ, ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಧ್ಯೇಯವಾಗಿದೆ.ರಾಜ್ಯದ 224 ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪಾವಗಡದಲ್ಲಿ 2500 ಮೆಗಾ ವ್ಯಾಟ್ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದ ಅವರು, ಭದ್ರಾ ಮೇಲ್ದಂಡೆ ಮತ್ತು ಎತ್ತಿನ ಹೊಳೆ ಯೋಜನೆಯಿಂದ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…