ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಪ್ರಸಕ್ತ ಮುಂಗಾರಿನಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಹಂಚಿಕೆ ಮಾಡಿದೆ. ಆದರೆ ಕರ್ನಾಟಕ ಇಲ್ಲಿಯವರೆಗೆ ಕೇವಲ 5.16 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ. ಜುಲೈವರೆಗೂ 6.8 ಲಕ್ಷ ಮಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿರುವುದಾಗಿ ಮುಖ್ಯಮಂತ್ರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…