ಕವಿಗಳ ಬರಹದ ಅನುಭವವು ವಾಚನದ ಮೂಲಕ ಬೇರೆಯವರಿಗೆ ಅನುಭಾವ ಆಗಬೇಕು

March 18, 2022
8:25 PM

ಕವಿಗಳ ಬರಹದ ಅನುಭವವು ವಾಚನದ ಮೂಲಕ ಬೇರೆಯವರಿಗೆ ಅನುಭಾವ ಆಗಬೇಕು, ಹಾಗಿದ್ದರೆ ಮಾತ್ರ ಯಶಸ್ವಿ ಬರಹಗಾರರಾಗಿ ಮೂಡಿಬರಲು ಸಾಧ್ಯ ಎಂದು ಯುವ ಕವಯತ್ರಿ, ಸಂಘಟಕರು, ಸಮಾಜ ಸೇವಕರು ಆದ ವಿಂಧ್ಯಾ ಎಸ್. ರೈ ಹೇಳಿದರು.

ಅವರು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಆಯೋಜಿಸಿದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ಸುಮಾರು 31 ಕವಿಗಳು ಭಾಗವಹಿಸಿದ್ದು ಜಿಲ್ಲೆಯ ವಿವಿಧ ಕಡೆಗಳಿಂದ ಹೆಚ್ಚಿನ ಯುವ ಕವಿಗಳು ಆಗಮಿಸಿದ್ದರು.

ಪುತ್ತೂರಿನ ಮಕ್ಕಳ ಮಂಟಪದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಉದ್ಘಾಟನೆ ಮತ್ತು ಯುವ ದನಿ -2022 ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದ. ಕ. ಜಿಲ್ಲಾ. ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರು  ಉಮೇಶ್ ನಾಯಕ್  ಚಿಗುರೆಲೆ ಬಳಗದ ಲಾಂಛನವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಜಯ ಹಾರ್ವಿನ್ ಮತ್ತು ಭೀಮರಾವ್ ವಾಷ್ಟರ್ ಹಾಗೂ ಮಕ್ಕಳ ಮಂಟಪದ ಮೇಲ್ವಿಚಾರಕರು ಮತ್ತು ಶಿಕ್ಷಣ ಸಿದ್ಧಾಂತಿ  ಎನ್. ಸುಕುಮಾರ ಗೌಡ ಭಾಗವಹಿಸಿ ನೂತನ ಸಾಹಿತ್ಯ ಬಳಗದ ಕಾರ್ಯಕ್ಕೆ ಶ್ಲಾಘಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror