Advertisement
ಸಾಹಿತ್ಯ

ಕವಿಗಳ ಬರಹದ ಅನುಭವವು ವಾಚನದ ಮೂಲಕ ಬೇರೆಯವರಿಗೆ ಅನುಭಾವ ಆಗಬೇಕು

Share

ಕವಿಗಳ ಬರಹದ ಅನುಭವವು ವಾಚನದ ಮೂಲಕ ಬೇರೆಯವರಿಗೆ ಅನುಭಾವ ಆಗಬೇಕು, ಹಾಗಿದ್ದರೆ ಮಾತ್ರ ಯಶಸ್ವಿ ಬರಹಗಾರರಾಗಿ ಮೂಡಿಬರಲು ಸಾಧ್ಯ ಎಂದು ಯುವ ಕವಯತ್ರಿ, ಸಂಘಟಕರು, ಸಮಾಜ ಸೇವಕರು ಆದ ವಿಂಧ್ಯಾ ಎಸ್. ರೈ ಹೇಳಿದರು.

ಅವರು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಆಯೋಜಿಸಿದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ಸುಮಾರು 31 ಕವಿಗಳು ಭಾಗವಹಿಸಿದ್ದು ಜಿಲ್ಲೆಯ ವಿವಿಧ ಕಡೆಗಳಿಂದ ಹೆಚ್ಚಿನ ಯುವ ಕವಿಗಳು ಆಗಮಿಸಿದ್ದರು.

ಪುತ್ತೂರಿನ ಮಕ್ಕಳ ಮಂಟಪದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಉದ್ಘಾಟನೆ ಮತ್ತು ಯುವ ದನಿ -2022 ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದ. ಕ. ಜಿಲ್ಲಾ. ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರು  ಉಮೇಶ್ ನಾಯಕ್  ಚಿಗುರೆಲೆ ಬಳಗದ ಲಾಂಛನವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಜಯ ಹಾರ್ವಿನ್ ಮತ್ತು ಭೀಮರಾವ್ ವಾಷ್ಟರ್ ಹಾಗೂ ಮಕ್ಕಳ ಮಂಟಪದ ಮೇಲ್ವಿಚಾರಕರು ಮತ್ತು ಶಿಕ್ಷಣ ಸಿದ್ಧಾಂತಿ  ಎನ್. ಸುಕುಮಾರ ಗೌಡ ಭಾಗವಹಿಸಿ ನೂತನ ಸಾಹಿತ್ಯ ಬಳಗದ ಕಾರ್ಯಕ್ಕೆ ಶ್ಲಾಘಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

12 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

12 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

14 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

14 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago