ಕವಿಗಳ ಬರಹದ ಅನುಭವವು ವಾಚನದ ಮೂಲಕ ಬೇರೆಯವರಿಗೆ ಅನುಭಾವ ಆಗಬೇಕು, ಹಾಗಿದ್ದರೆ ಮಾತ್ರ ಯಶಸ್ವಿ ಬರಹಗಾರರಾಗಿ ಮೂಡಿಬರಲು ಸಾಧ್ಯ ಎಂದು ಯುವ ಕವಯತ್ರಿ, ಸಂಘಟಕರು, ಸಮಾಜ ಸೇವಕರು ಆದ ವಿಂಧ್ಯಾ ಎಸ್. ರೈ ಹೇಳಿದರು.
ಅವರು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಆಯೋಜಿಸಿದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ಸುಮಾರು 31 ಕವಿಗಳು ಭಾಗವಹಿಸಿದ್ದು ಜಿಲ್ಲೆಯ ವಿವಿಧ ಕಡೆಗಳಿಂದ ಹೆಚ್ಚಿನ ಯುವ ಕವಿಗಳು ಆಗಮಿಸಿದ್ದರು.
ಪುತ್ತೂರಿನ ಮಕ್ಕಳ ಮಂಟಪದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಉದ್ಘಾಟನೆ ಮತ್ತು ಯುವ ದನಿ -2022 ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದ. ಕ. ಜಿಲ್ಲಾ. ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರು ಉಮೇಶ್ ನಾಯಕ್ ಚಿಗುರೆಲೆ ಬಳಗದ ಲಾಂಛನವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಜಯ ಹಾರ್ವಿನ್ ಮತ್ತು ಭೀಮರಾವ್ ವಾಷ್ಟರ್ ಹಾಗೂ ಮಕ್ಕಳ ಮಂಟಪದ ಮೇಲ್ವಿಚಾರಕರು ಮತ್ತು ಶಿಕ್ಷಣ ಸಿದ್ಧಾಂತಿ ಎನ್. ಸುಕುಮಾರ ಗೌಡ ಭಾಗವಹಿಸಿ ನೂತನ ಸಾಹಿತ್ಯ ಬಳಗದ ಕಾರ್ಯಕ್ಕೆ ಶ್ಲಾಘಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…