Advertisement
ರಾಜ್ಯ

ಮದ್ಯ ಸೇವಿಸಿ ಸರ್ಕಾರಿ ಕಚೇರಿಗಳಿಗೆ ಕರ್ತವ್ಯಕ್ಕೆ ಹಾಜರಾದರೆ ಸೇವೆಯಿಂದ ಅಮಾನತು

Share

ಮದ್ಯ ಸೇವಿಸಿ ಶಾಲಾ-ಕಾಲೇಜು ಗಳಿಗೆ, ಸರ್ಕಾರಿ ಕಚೇರಿಗಳಿಗೆ ಹಾಜರಾಗಿ ಕರ್ತವ್ಯ ಲೋಪವೆಸಗುವ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement
Advertisement
Advertisement

ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ ಪಂಗಡದ ಜನಾಂಗದ ಮೇಲೆ ದೌರ್ಜನ್ಯಗಳನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮ ಚಾರಿಗಳ ಸುರಕ್ಷತೆಗಾಗಿ ರಚಿಸಿರುವ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಸದಸ್ಯರ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು.

Advertisement

ಜಿಲ್ಲೆಯಲ್ಲಿ ಯಾವುದೇ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರು ಮದ್ಯ ಸೇವಿಸಿ ಹಾಜರಾಗುವುದು ಕಂಡುಬಂದಲ್ಲಿ ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು.

ಮದ್ಯಪಾನ ಸೇವನೆ ಖಚಿತವಾದರೆ ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಶಿಸ್ತು ಕ್ರಮವನ್ನು ವಹಿಸಬೇಕು. ಅಮಾನತುಗೊಂಡ ಜಾಗಕ್ಕೆ ಬೇರೊಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

19 mins ago

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…

2 hours ago

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

15 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

17 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

17 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

17 hours ago