ಮದ್ಯ ಸೇವಿಸಿ ಶಾಲಾ-ಕಾಲೇಜು ಗಳಿಗೆ, ಸರ್ಕಾರಿ ಕಚೇರಿಗಳಿಗೆ ಹಾಜರಾಗಿ ಕರ್ತವ್ಯ ಲೋಪವೆಸಗುವ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ ಪಂಗಡದ ಜನಾಂಗದ ಮೇಲೆ ದೌರ್ಜನ್ಯಗಳನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮ ಚಾರಿಗಳ ಸುರಕ್ಷತೆಗಾಗಿ ರಚಿಸಿರುವ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಸದಸ್ಯರ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರು ಮದ್ಯ ಸೇವಿಸಿ ಹಾಜರಾಗುವುದು ಕಂಡುಬಂದಲ್ಲಿ ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು.
ಮದ್ಯಪಾನ ಸೇವನೆ ಖಚಿತವಾದರೆ ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಶಿಸ್ತು ಕ್ರಮವನ್ನು ವಹಿಸಬೇಕು. ಅಮಾನತುಗೊಂಡ ಜಾಗಕ್ಕೆ ಬೇರೊಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…