ಶ್ರೀಗಂಧ ಬೆಳೆಗಾರರ ಭದ್ರತೆಗೆ ಆಗ್ರಹ

January 24, 2026
11:35 PM

ಸರ್ಕಾರ ಶ್ರೀಗಂಧ ಬೆಳೆಯಲು ಪ್ರೋತ್ಸಾಹ ನೀಡುತ್ತಿದ್ದರೂ, ಶ್ರೀಗಂಧ ಬೆಳೆಗಾರರು ಎದುರಿಸುತ್ತಿರುವ ಕಳ್ಳತನ ಸಮಸ್ಯೆ ಹಾಗೂ ಭದ್ರತಾ ಆತಂಕಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀಗಂಧ ಬೆಳೆಗಾರರು ಕಳ್ಳತನ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಶ್ರೀಗಂಧ ಬೆಳೆ ವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೈತರು ಆತಂಕದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಂಧದ ಬೆಳೆ ಹಾಗೂ ಬೆಳೆಗಾರ ರೈತರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ, ಬೆಳೆಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಶ್ರೀಗಂಧ ಅತ್ಯಂತ ಮೌಲ್ಯಯುತ ಹಾಗೂ ಆರ್ಥಿಕ ಲಾಭದ ಬೆಳೆ ಆಗಿರುವುದರಿಂದ ಕಳ್ಳರ ಕಣ್ಣಿಗೆ ಬೀಳುತ್ತಿದೆ. ರೈತರು ವರ್ಷಗಳ ಕಾಲ ಶ್ರಮಪಟ್ಟು ಬೆಳೆಸುವ ಶ್ರೀಗಂಧ ಮರಗಳನ್ನು ರಾತ್ರಿ ವೇಳೆ ಕತ್ತರಿಸಿ ಕಳ್ಳತನ ಮಾಡುವ ಘಟನೆಗಳು ಹೆಚ್ಚಾಗುತ್ತಿರುವುದರಿಂದ, ಬೆಳೆಗಾರರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

“ಸರ್ಕಾರ ಶ್ರೀಗಂಧ ಬೆಳೆಯಿರಿ ಎಂದು ಪ್ರೋತ್ಸಾಹ ನೀಡುತ್ತಿದೆ. ಆದರೆ ಬೆಳೆಯಲು ಆರಂಭಿಸಿದ ರೈತರಿಗೆ ಸೂಕ್ತ ಭದ್ರತೆ ನೀಡದೆ ಕಣ್ಣು ಮುಚ್ಚಿ ಕುಳಿತಿದೆ. ರೈತರ ಬೆಳೆ ರಕ್ಷಣೆಗೂ ಸರ್ಕಾರ ಸ್ಪಂದಿಸಬೇಕು,” ಎಂದು ಶ್ರೀಗಂಧ ಬೆಳೆಗಾರರು ಮನವಿಯಲ್ಲಿ ತಿಳಿಸಿದ್ದಾರೆ.

ಶ್ರೀಗಂಧ ಬೆಳೆಗಾರರ ಮನವಿಗೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror