ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ದತ್ತಮಾಲಾಧಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ಕುರಿತು ಚಿಕ್ಕಮಗಳೂರಿನಲ್ಲಿಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು ಸುಮಾರು 1700 ಸಿಬ್ಬಂದಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒರ್ವ ಎಸ್.ಪಿ, 6 ಜನ ಡಿ.ವೈ ಎಸ್.ಪಿ 1500 ಪೊಲೀಸ್ ಕಾನ್ಸ್ ಟೇಬಲ್, 11 ಡಿ.ಎ.ಆರ್ ತುಕ್ಕಡಿ ಸೇರಿ ಒಟ್ಟು 1700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೆ ದತ್ತಪೀಠದಲ್ಲಿ ಸಿ.ಸಿ ಟಿ.ವಿಗಳನ್ನು ಅಳವಡಿಸಲಾಗಿದ್ದು ಡ್ರೋಣ್ ಚಿತ್ರೀಕರಣ, ವಾಹನಗಳ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…