ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ದತ್ತಮಾಲಾಧಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ಕುರಿತು ಚಿಕ್ಕಮಗಳೂರಿನಲ್ಲಿಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು ಸುಮಾರು 1700 ಸಿಬ್ಬಂದಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒರ್ವ ಎಸ್.ಪಿ, 6 ಜನ ಡಿ.ವೈ ಎಸ್.ಪಿ 1500 ಪೊಲೀಸ್ ಕಾನ್ಸ್ ಟೇಬಲ್, 11 ಡಿ.ಎ.ಆರ್ ತುಕ್ಕಡಿ ಸೇರಿ ಒಟ್ಟು 1700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೆ ದತ್ತಪೀಠದಲ್ಲಿ ಸಿ.ಸಿ ಟಿ.ವಿಗಳನ್ನು ಅಳವಡಿಸಲಾಗಿದ್ದು ಡ್ರೋಣ್ ಚಿತ್ರೀಕರಣ, ವಾಹನಗಳ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…