ಚಿಕ್ಕಮಗಳೂರಿನಲ್ಲಿ ದೇವೀರಮ್ಮ ಜಾತ್ರಾ ಸಡಗರ | ಮಳೆಯ ನಡುವೆಯೂ ಬೆಟ್ಟ ಏರಿದ ಭಕ್ತರು |

November 1, 2024
6:15 AM

ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.  ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು  ಬೆಟ್ಟದ ಮೇಲೆ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಪ್ರತಿ ವರ್ಷ ದೀಪಾವಳಿಯ ನರಕ ಚತುದರ್ಶಿ ದಿನ ಬೆಟ್ಟದಲ್ಲಿರುವ ದೇವಿರಮ್ಮ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಮೈಸೂರು ಅರಮನೆಯಿಂದ ಈ ದೇವಾಲಯಕ್ಕೆ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಕಳುಹಿಸಲಾಗುತ್ತದೆ. ಮಳೆಯ ನಡುವೆಯೂ  ಭಕ್ತರು ಬೆಟ್ಟವನ್ನು ಏರುತ್ತಿದ್ದಾರೆ.  ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮ ತಾಯಿಯನ್ನು ನೋಡಲು ಪ್ರತಿವರ್ಷ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಾರೆ.

ಸಮುದ್ರಮಟ್ಟದಿಂದ 3000 ಅಡಿ ಎತ್ತರದಲ್ಲಿರುವ ದೇವಿರಮ್ಮ ಜಾತ್ರೆಯಲ್ಲಿ ಸಾವಿರಾರು ಭಕ್ತರು  ಮಳೆ ನಡುವೆ ಜಾರುವ ಗುಡ್ಡವನ್ನು ಏರುತ್ತಾರೆ. ಬೆಟ್ಟ ಹತ್ತುವಾಗ ಕೆಲವು ಭಕ್ತರಿಗೆ  ತೊಂದರೆಗಳಾಗಿವೆ. ಈ ಗುಡ್ಡವನ್ನು ಹತ್ತಬೇಕು ಅಂದರೆ 3 ಕಿ.ಮೀ. ಹಗ್ಗ ಹಿಡಿದು ಹತ್ತಬೇಕು. ಮಳೆ, ಕೆಸರಿನ ನಡುವೆ ಗುಡ್ಡ ಹತ್ತುವುದು ಭಕ್ತರಿಗೆ ಒಂದು ಸವಾಲಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸುತ್ತಲೇ ಭಕ್ತರು ಬೆಟ್ಟವನ್ನು ಹತ್ತುವ ಮೂಲಕ ದೇವರ ದರ್ಶನ ಪಡೆಯುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror