ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ದೇವೀರಮ್ಮ ಜಾತ್ರಾ ಸಡಗರ | ಮಳೆಯ ನಡುವೆಯೂ ಬೆಟ್ಟ ಏರಿದ ಭಕ್ತರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.  ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು  ಬೆಟ್ಟದ ಮೇಲೆ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಪ್ರತಿ ವರ್ಷ ದೀಪಾವಳಿಯ ನರಕ ಚತುದರ್ಶಿ ದಿನ ಬೆಟ್ಟದಲ್ಲಿರುವ ದೇವಿರಮ್ಮ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಮೈಸೂರು ಅರಮನೆಯಿಂದ ಈ ದೇವಾಲಯಕ್ಕೆ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಕಳುಹಿಸಲಾಗುತ್ತದೆ. ಮಳೆಯ ನಡುವೆಯೂ  ಭಕ್ತರು ಬೆಟ್ಟವನ್ನು ಏರುತ್ತಿದ್ದಾರೆ.  ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮ ತಾಯಿಯನ್ನು ನೋಡಲು ಪ್ರತಿವರ್ಷ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಾರೆ.

Advertisement
Advertisement

ಸಮುದ್ರಮಟ್ಟದಿಂದ 3000 ಅಡಿ ಎತ್ತರದಲ್ಲಿರುವ ದೇವಿರಮ್ಮ ಜಾತ್ರೆಯಲ್ಲಿ ಸಾವಿರಾರು ಭಕ್ತರು  ಮಳೆ ನಡುವೆ ಜಾರುವ ಗುಡ್ಡವನ್ನು ಏರುತ್ತಾರೆ. ಬೆಟ್ಟ ಹತ್ತುವಾಗ ಕೆಲವು ಭಕ್ತರಿಗೆ  ತೊಂದರೆಗಳಾಗಿವೆ. ಈ ಗುಡ್ಡವನ್ನು ಹತ್ತಬೇಕು ಅಂದರೆ 3 ಕಿ.ಮೀ. ಹಗ್ಗ ಹಿಡಿದು ಹತ್ತಬೇಕು. ಮಳೆ, ಕೆಸರಿನ ನಡುವೆ ಗುಡ್ಡ ಹತ್ತುವುದು ಭಕ್ತರಿಗೆ ಒಂದು ಸವಾಲಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸುತ್ತಲೇ ಭಕ್ತರು ಬೆಟ್ಟವನ್ನು ಹತ್ತುವ ಮೂಲಕ ದೇವರ ದರ್ಶನ ಪಡೆಯುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

7 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

15 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

15 hours ago