Advertisement
ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ದೇವೀರಮ್ಮ ಜಾತ್ರಾ ಸಡಗರ | ಮಳೆಯ ನಡುವೆಯೂ ಬೆಟ್ಟ ಏರಿದ ಭಕ್ತರು |

Share

ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.  ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು  ಬೆಟ್ಟದ ಮೇಲೆ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಪ್ರತಿ ವರ್ಷ ದೀಪಾವಳಿಯ ನರಕ ಚತುದರ್ಶಿ ದಿನ ಬೆಟ್ಟದಲ್ಲಿರುವ ದೇವಿರಮ್ಮ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಮೈಸೂರು ಅರಮನೆಯಿಂದ ಈ ದೇವಾಲಯಕ್ಕೆ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಕಳುಹಿಸಲಾಗುತ್ತದೆ. ಮಳೆಯ ನಡುವೆಯೂ  ಭಕ್ತರು ಬೆಟ್ಟವನ್ನು ಏರುತ್ತಿದ್ದಾರೆ.  ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮ ತಾಯಿಯನ್ನು ನೋಡಲು ಪ್ರತಿವರ್ಷ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಾರೆ.

ಸಮುದ್ರಮಟ್ಟದಿಂದ 3000 ಅಡಿ ಎತ್ತರದಲ್ಲಿರುವ ದೇವಿರಮ್ಮ ಜಾತ್ರೆಯಲ್ಲಿ ಸಾವಿರಾರು ಭಕ್ತರು  ಮಳೆ ನಡುವೆ ಜಾರುವ ಗುಡ್ಡವನ್ನು ಏರುತ್ತಾರೆ. ಬೆಟ್ಟ ಹತ್ತುವಾಗ ಕೆಲವು ಭಕ್ತರಿಗೆ  ತೊಂದರೆಗಳಾಗಿವೆ. ಈ ಗುಡ್ಡವನ್ನು ಹತ್ತಬೇಕು ಅಂದರೆ 3 ಕಿ.ಮೀ. ಹಗ್ಗ ಹಿಡಿದು ಹತ್ತಬೇಕು. ಮಳೆ, ಕೆಸರಿನ ನಡುವೆ ಗುಡ್ಡ ಹತ್ತುವುದು ಭಕ್ತರಿಗೆ ಒಂದು ಸವಾಲಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸುತ್ತಲೇ ಭಕ್ತರು ಬೆಟ್ಟವನ್ನು ಹತ್ತುವ ಮೂಲಕ ದೇವರ ದರ್ಶನ ಪಡೆಯುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

4 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

22 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago