Advertisement
ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ದೇವೀರಮ್ಮ ಜಾತ್ರಾ ಸಡಗರ | ಮಳೆಯ ನಡುವೆಯೂ ಬೆಟ್ಟ ಏರಿದ ಭಕ್ತರು |

Share

ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.  ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು  ಬೆಟ್ಟದ ಮೇಲೆ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಪ್ರತಿ ವರ್ಷ ದೀಪಾವಳಿಯ ನರಕ ಚತುದರ್ಶಿ ದಿನ ಬೆಟ್ಟದಲ್ಲಿರುವ ದೇವಿರಮ್ಮ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಮೈಸೂರು ಅರಮನೆಯಿಂದ ಈ ದೇವಾಲಯಕ್ಕೆ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಕಳುಹಿಸಲಾಗುತ್ತದೆ. ಮಳೆಯ ನಡುವೆಯೂ  ಭಕ್ತರು ಬೆಟ್ಟವನ್ನು ಏರುತ್ತಿದ್ದಾರೆ.  ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮ ತಾಯಿಯನ್ನು ನೋಡಲು ಪ್ರತಿವರ್ಷ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಾರೆ.

ಸಮುದ್ರಮಟ್ಟದಿಂದ 3000 ಅಡಿ ಎತ್ತರದಲ್ಲಿರುವ ದೇವಿರಮ್ಮ ಜಾತ್ರೆಯಲ್ಲಿ ಸಾವಿರಾರು ಭಕ್ತರು  ಮಳೆ ನಡುವೆ ಜಾರುವ ಗುಡ್ಡವನ್ನು ಏರುತ್ತಾರೆ. ಬೆಟ್ಟ ಹತ್ತುವಾಗ ಕೆಲವು ಭಕ್ತರಿಗೆ  ತೊಂದರೆಗಳಾಗಿವೆ. ಈ ಗುಡ್ಡವನ್ನು ಹತ್ತಬೇಕು ಅಂದರೆ 3 ಕಿ.ಮೀ. ಹಗ್ಗ ಹಿಡಿದು ಹತ್ತಬೇಕು. ಮಳೆ, ಕೆಸರಿನ ನಡುವೆ ಗುಡ್ಡ ಹತ್ತುವುದು ಭಕ್ತರಿಗೆ ಒಂದು ಸವಾಲಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸುತ್ತಲೇ ಭಕ್ತರು ಬೆಟ್ಟವನ್ನು ಹತ್ತುವ ಮೂಲಕ ದೇವರ ದರ್ಶನ ಪಡೆಯುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 days ago