Advertisement
MIRROR FOCUS

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

Share

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವೆಡೆ ತೀವ್ರ ಅನಾಹುತಕ್ಕೆ ಕಾರಣವಾಗಿದೆ. ಮಳೆಯ ಅಬ್ಬರದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.  ಜಿಲ್ಲೆಯ ವಿವಿಧ ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆಗಳು ವರದಿಯಾಗಿವೆ. ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.

ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಹಾಗೂ ಕೊಟ್ಟಿಗೆಹಾರ ಪ್ರದೇಶಗಳಲ್ಲಿ ಮಳೆಯ ಆರ್ಭಟಕ್ಕೆ ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಇದರಿಂದಾಗಿ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಿನಲ್ಲಿ ದಿನ ಕಳೆಯುವ ಪರಿಸ್ಥಿತಿ ಉಂಟಾಗಿದೆ. ರಸ್ತೆ ಸಂಚಾರಕ್ಕೂ ಕೆಲವೆಡೆ ಅಡಚಣೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು 4 ದಿನ ಎಚ್ಚರಿಕೆ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಸಾರ್ವಜನಿಕರು ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮಗಳ ಕಡೆಗೆ ಇರಲಿ ಗಮನ :

  • ಹಳೆಯ ಮರಗಳ ಹತ್ತಿರ ನಿಲ್ಲಬೇಡಿ
  • ವಿದ್ಯುತ್ ಕಂಬಗಳ ಬಳಿ ಹೋಗಬೇಡಿ
  • ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡಿ
  • ಮಳೆಯ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿ ಇರಿ

Heavy rainfall in Chikkamagaluru district has caused widespread disruption, with trees and electric poles uprooted in several areas. Power outages have affected many villages. The India Meteorological Department has forecast continued rain with strong winds for the next four days, urging residents to stay cautious.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

5 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

5 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

6 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

8 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

20 hours ago