#KSRTC #RuralMirror | ಹೊಯ್ಸಳ ರಾಜವಂಶದ ಹೊಯ್ಸಳಲು ಗ್ರಾಮ | ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿ ಈ ಊರಿಗೆ ಬಂದ ಸರ್ಕಾರಿ ಬಸ್ …. ! |

June 26, 2023
12:23 PM

ನಮ್ಮ ಜಗತ್ತು ಎಷ್ಟು ಮುಂದುವರೆದಿದೆ ಎಂದರೆ ಮಂಗಳ ಅಂಗಳಕ್ಕೆ, ಇತ್ತ ಚಂದ್ರನ ಲೋಕಕ್ಕೆ, ಜನ ಸಾಮಾನ್ಯನೂ ವಿಮಾನದಲ್ಲಿ ಓಡಾಡಬೇಕು ಅನ್ನುವ ಯೋಜನೆಗಳು, ಕೆಲಸಕ್ಕೆ ರೋಬೋಗಳು ಒಂದಾ ಎರಡಾ.. ಇತ್ತೀಚೆಗೆ 1912ರಲ್ಲಿ ಮುಳುಗಿದ್ದ ಟೈಟಾನಿಕ್ ದೈತ್ಯ ಹಡಗು ನೋಡಲು ಸುಮಾರು 3800 ಕಿ ಮೀ ಆಳಕ್ಕೆ ಹೋಗಿ ಅದರ ಅವಶೇಷ ನೋಡಿ ಬರುವ ವ್ಯವಸ್ಥೆ ಕೂಡ ಇದೆ. ಆದರೆ ಇವೆಲ್ಲಾ ಕೇವಲ ಶ್ರೀಮಂತರ ಪಾಲಿಗೆ. ಅದೇ ಬಡವರ ಪಾಲಿಗೆ ಒಂದು ಸರ್ಕಾರಿ ಕೆಂಪು ಬಸ್ ಕೂಡ ಗತಿ ಇಲ್ಲ….!

ಕಾಂಗ್ರೆಸ್‍ ಸರ್ಕಾರ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತಂದಿದೆ. ಆದರೆ ಈ ಸರ್ಕಾರಗಳು ತಮಗೆ ಆಗುವ ಲಾಭ ನೋಡುತ್ತವೇ ವಿನಃ ಜನರ ಅನುಕೂಲ ನೋಡುವುದು ಬಹಳ ವಿರಳ. ಈ ದಿನಗಳಲ್ಲೂ ಅದೇಷ್ಟೋ ಹಳ್ಳಿಗಳು ಇಂದಿನವರೆಗೂ ಸರ್ಕಾರಿ ಬಸ್ ಕಾಣದೆ ಜೀವನ ನಡೆಸುತ್ತಿವೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಇದೆ. ಆದರೆ ಬಸ್ ವ್ಯವಸ್ಥೆಗಳೇ ಇಲ್ಲ. ಇಂತಹ ಸಮಸ್ಯೆಗಳನ್ನು ನೋಡಿ ಸರ್ಕಾರ ಎಂದೂ ಪರಿಹರಿಸಲು ಮುಂದಾಗುವುದಿಲ್ಲ. ಬಸ್ ಇಲ್ಲದ ಊರುಗಳಿಗೆ ದಿನದಲ್ಲಿ ಕನಿಷ್ಠ ಎರಡು ಬಾರಿಯಾದರು ಬಸ್ ವ್ಯವಸ್ಥೆ ಮಾಡಿದ್ರೆ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕೆಲಸಕ್ಕೆ ಹೊರಗೆ ಹೋಗುವ ಮಂದಿ, ಆಸ್ಪತ್ರೆಗೆ ಓಡಾಡುವ ಹಿರಿ ಜೀವಗಳು, ಗರ್ಭಿಣಿಯರಿಗೆ ಸಹಾಯವಾಗುತ್ತದೆ. ಇದೆಲ್ಲಾ ಬಿಟ್ಟು ಕೇವಲ ತಮ್ಮ ಅಧಿಕಾರದ ಲಾಲಾಸೆಗಾಗಿ ಉಚಿತಗಳನ್ನು ನೀಡಿ ಜನರನ್ನು ಓಲೈಸುತ್ತಿವೆ.

ಸ್ವಾತಂತ್ರ್ಯ ನಂತರ ಈ ಊರಿಗೆ ಮೊದಲ ಬಾರಿಗೆ ಸರ್ಕಾರಿ ಬಸ್ ಬಂದಿದೆ….! ನೀವೆ ಯೋಚಿಸಿ ಅಲ್ಲಿನ ಜನರ ಬದುಕು ಹೇಗಿದ್ದಿರಬಹುದು…? ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು, ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

Advertisement

ಹೊಯ್ಸಳ ರಾಜವಂಶದ ಮೂಲವಾದ ಹೊಯ್ಸಳಲು ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೊಯ್ಸಳಲು‌ ಗ್ರಾಮಕ್ಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿರುವುದನ್ನು ಕಂಡು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

ದಶಕಗಳಿಂದ ಬಸ್ ಸೌಕರ್ಯಕ್ಕಾಗಿ ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಮಾಡುತ್ತಲೆ ಬಂದಿದ್ದರು. ಆದರೆ ಬಸ್ ಸೌಲಭ್ಯ ದೊರೆತಿರಲಿಲ್ಲ. ಬಸ್ ಇಲ್ಲದ ಕಾರಣ ಪ್ರತಿನಿತ್ಯ 5 ಕಿ.ಮೀ. ನಡೆದು ಶಾಲಾ ಮಕ್ಕಳು, ಗ್ರಾಮಸ್ಥರು ಮೂಡಿಗೆರೆಗೆ ತೆರಳುತ್ತಿದ್ದರು. ಹೊಯ್ಸಳಲು 200 ಜನರಿರುವ ಮಲೆನಾಡು ಭಾಗದ ಕುಗ್ರಾಮವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror