Advertisement
ಸುದ್ದಿಗಳು

#KSRTC #RuralMirror | ಹೊಯ್ಸಳ ರಾಜವಂಶದ ಹೊಯ್ಸಳಲು ಗ್ರಾಮ | ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿ ಈ ಊರಿಗೆ ಬಂದ ಸರ್ಕಾರಿ ಬಸ್ …. ! |

Share

ನಮ್ಮ ಜಗತ್ತು ಎಷ್ಟು ಮುಂದುವರೆದಿದೆ ಎಂದರೆ ಮಂಗಳ ಅಂಗಳಕ್ಕೆ, ಇತ್ತ ಚಂದ್ರನ ಲೋಕಕ್ಕೆ, ಜನ ಸಾಮಾನ್ಯನೂ ವಿಮಾನದಲ್ಲಿ ಓಡಾಡಬೇಕು ಅನ್ನುವ ಯೋಜನೆಗಳು, ಕೆಲಸಕ್ಕೆ ರೋಬೋಗಳು ಒಂದಾ ಎರಡಾ.. ಇತ್ತೀಚೆಗೆ 1912ರಲ್ಲಿ ಮುಳುಗಿದ್ದ ಟೈಟಾನಿಕ್ ದೈತ್ಯ ಹಡಗು ನೋಡಲು ಸುಮಾರು 3800 ಕಿ ಮೀ ಆಳಕ್ಕೆ ಹೋಗಿ ಅದರ ಅವಶೇಷ ನೋಡಿ ಬರುವ ವ್ಯವಸ್ಥೆ ಕೂಡ ಇದೆ. ಆದರೆ ಇವೆಲ್ಲಾ ಕೇವಲ ಶ್ರೀಮಂತರ ಪಾಲಿಗೆ. ಅದೇ ಬಡವರ ಪಾಲಿಗೆ ಒಂದು ಸರ್ಕಾರಿ ಕೆಂಪು ಬಸ್ ಕೂಡ ಗತಿ ಇಲ್ಲ….!

ಕಾಂಗ್ರೆಸ್‍ ಸರ್ಕಾರ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತಂದಿದೆ. ಆದರೆ ಈ ಸರ್ಕಾರಗಳು ತಮಗೆ ಆಗುವ ಲಾಭ ನೋಡುತ್ತವೇ ವಿನಃ ಜನರ ಅನುಕೂಲ ನೋಡುವುದು ಬಹಳ ವಿರಳ. ಈ ದಿನಗಳಲ್ಲೂ ಅದೇಷ್ಟೋ ಹಳ್ಳಿಗಳು ಇಂದಿನವರೆಗೂ ಸರ್ಕಾರಿ ಬಸ್ ಕಾಣದೆ ಜೀವನ ನಡೆಸುತ್ತಿವೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಇದೆ. ಆದರೆ ಬಸ್ ವ್ಯವಸ್ಥೆಗಳೇ ಇಲ್ಲ. ಇಂತಹ ಸಮಸ್ಯೆಗಳನ್ನು ನೋಡಿ ಸರ್ಕಾರ ಎಂದೂ ಪರಿಹರಿಸಲು ಮುಂದಾಗುವುದಿಲ್ಲ. ಬಸ್ ಇಲ್ಲದ ಊರುಗಳಿಗೆ ದಿನದಲ್ಲಿ ಕನಿಷ್ಠ ಎರಡು ಬಾರಿಯಾದರು ಬಸ್ ವ್ಯವಸ್ಥೆ ಮಾಡಿದ್ರೆ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕೆಲಸಕ್ಕೆ ಹೊರಗೆ ಹೋಗುವ ಮಂದಿ, ಆಸ್ಪತ್ರೆಗೆ ಓಡಾಡುವ ಹಿರಿ ಜೀವಗಳು, ಗರ್ಭಿಣಿಯರಿಗೆ ಸಹಾಯವಾಗುತ್ತದೆ. ಇದೆಲ್ಲಾ ಬಿಟ್ಟು ಕೇವಲ ತಮ್ಮ ಅಧಿಕಾರದ ಲಾಲಾಸೆಗಾಗಿ ಉಚಿತಗಳನ್ನು ನೀಡಿ ಜನರನ್ನು ಓಲೈಸುತ್ತಿವೆ.

ಸ್ವಾತಂತ್ರ್ಯ ನಂತರ ಈ ಊರಿಗೆ ಮೊದಲ ಬಾರಿಗೆ ಸರ್ಕಾರಿ ಬಸ್ ಬಂದಿದೆ….! ನೀವೆ ಯೋಚಿಸಿ ಅಲ್ಲಿನ ಜನರ ಬದುಕು ಹೇಗಿದ್ದಿರಬಹುದು…? ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು, ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

ಹೊಯ್ಸಳ ರಾಜವಂಶದ ಮೂಲವಾದ ಹೊಯ್ಸಳಲು ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೊಯ್ಸಳಲು‌ ಗ್ರಾಮಕ್ಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿರುವುದನ್ನು ಕಂಡು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

ದಶಕಗಳಿಂದ ಬಸ್ ಸೌಕರ್ಯಕ್ಕಾಗಿ ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಮಾಡುತ್ತಲೆ ಬಂದಿದ್ದರು. ಆದರೆ ಬಸ್ ಸೌಲಭ್ಯ ದೊರೆತಿರಲಿಲ್ಲ. ಬಸ್ ಇಲ್ಲದ ಕಾರಣ ಪ್ರತಿನಿತ್ಯ 5 ಕಿ.ಮೀ. ನಡೆದು ಶಾಲಾ ಮಕ್ಕಳು, ಗ್ರಾಮಸ್ಥರು ಮೂಡಿಗೆರೆಗೆ ತೆರಳುತ್ತಿದ್ದರು. ಹೊಯ್ಸಳಲು 200 ಜನರಿರುವ ಮಲೆನಾಡು ಭಾಗದ ಕುಗ್ರಾಮವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

8 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago