Advertisement
ಸುದ್ದಿಗಳು

#KSRTC #RuralMirror | ಹೊಯ್ಸಳ ರಾಜವಂಶದ ಹೊಯ್ಸಳಲು ಗ್ರಾಮ | ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿ ಈ ಊರಿಗೆ ಬಂದ ಸರ್ಕಾರಿ ಬಸ್ …. ! |

Share

ನಮ್ಮ ಜಗತ್ತು ಎಷ್ಟು ಮುಂದುವರೆದಿದೆ ಎಂದರೆ ಮಂಗಳ ಅಂಗಳಕ್ಕೆ, ಇತ್ತ ಚಂದ್ರನ ಲೋಕಕ್ಕೆ, ಜನ ಸಾಮಾನ್ಯನೂ ವಿಮಾನದಲ್ಲಿ ಓಡಾಡಬೇಕು ಅನ್ನುವ ಯೋಜನೆಗಳು, ಕೆಲಸಕ್ಕೆ ರೋಬೋಗಳು ಒಂದಾ ಎರಡಾ.. ಇತ್ತೀಚೆಗೆ 1912ರಲ್ಲಿ ಮುಳುಗಿದ್ದ ಟೈಟಾನಿಕ್ ದೈತ್ಯ ಹಡಗು ನೋಡಲು ಸುಮಾರು 3800 ಕಿ ಮೀ ಆಳಕ್ಕೆ ಹೋಗಿ ಅದರ ಅವಶೇಷ ನೋಡಿ ಬರುವ ವ್ಯವಸ್ಥೆ ಕೂಡ ಇದೆ. ಆದರೆ ಇವೆಲ್ಲಾ ಕೇವಲ ಶ್ರೀಮಂತರ ಪಾಲಿಗೆ. ಅದೇ ಬಡವರ ಪಾಲಿಗೆ ಒಂದು ಸರ್ಕಾರಿ ಕೆಂಪು ಬಸ್ ಕೂಡ ಗತಿ ಇಲ್ಲ….!

ಕಾಂಗ್ರೆಸ್‍ ಸರ್ಕಾರ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತಂದಿದೆ. ಆದರೆ ಈ ಸರ್ಕಾರಗಳು ತಮಗೆ ಆಗುವ ಲಾಭ ನೋಡುತ್ತವೇ ವಿನಃ ಜನರ ಅನುಕೂಲ ನೋಡುವುದು ಬಹಳ ವಿರಳ. ಈ ದಿನಗಳಲ್ಲೂ ಅದೇಷ್ಟೋ ಹಳ್ಳಿಗಳು ಇಂದಿನವರೆಗೂ ಸರ್ಕಾರಿ ಬಸ್ ಕಾಣದೆ ಜೀವನ ನಡೆಸುತ್ತಿವೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಇದೆ. ಆದರೆ ಬಸ್ ವ್ಯವಸ್ಥೆಗಳೇ ಇಲ್ಲ. ಇಂತಹ ಸಮಸ್ಯೆಗಳನ್ನು ನೋಡಿ ಸರ್ಕಾರ ಎಂದೂ ಪರಿಹರಿಸಲು ಮುಂದಾಗುವುದಿಲ್ಲ. ಬಸ್ ಇಲ್ಲದ ಊರುಗಳಿಗೆ ದಿನದಲ್ಲಿ ಕನಿಷ್ಠ ಎರಡು ಬಾರಿಯಾದರು ಬಸ್ ವ್ಯವಸ್ಥೆ ಮಾಡಿದ್ರೆ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕೆಲಸಕ್ಕೆ ಹೊರಗೆ ಹೋಗುವ ಮಂದಿ, ಆಸ್ಪತ್ರೆಗೆ ಓಡಾಡುವ ಹಿರಿ ಜೀವಗಳು, ಗರ್ಭಿಣಿಯರಿಗೆ ಸಹಾಯವಾಗುತ್ತದೆ. ಇದೆಲ್ಲಾ ಬಿಟ್ಟು ಕೇವಲ ತಮ್ಮ ಅಧಿಕಾರದ ಲಾಲಾಸೆಗಾಗಿ ಉಚಿತಗಳನ್ನು ನೀಡಿ ಜನರನ್ನು ಓಲೈಸುತ್ತಿವೆ.

ಸ್ವಾತಂತ್ರ್ಯ ನಂತರ ಈ ಊರಿಗೆ ಮೊದಲ ಬಾರಿಗೆ ಸರ್ಕಾರಿ ಬಸ್ ಬಂದಿದೆ….! ನೀವೆ ಯೋಚಿಸಿ ಅಲ್ಲಿನ ಜನರ ಬದುಕು ಹೇಗಿದ್ದಿರಬಹುದು…? ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು, ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

ಹೊಯ್ಸಳ ರಾಜವಂಶದ ಮೂಲವಾದ ಹೊಯ್ಸಳಲು ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೊಯ್ಸಳಲು‌ ಗ್ರಾಮಕ್ಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ ಆಗಮಿಸಿರುವುದನ್ನು ಕಂಡು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಸರ್ಕಾರಿ ಬಸ್ ನೋಡಿ ಸಂಭ್ರಮಿಸಿದ ಗ್ರಾಮಸ್ಥರು ಬಸ್​ನ್ನು ಅಲಂಕರಿಸಿ ಪೂಜೆ ಮಾಡಿದ್ದಾರೆ.

ದಶಕಗಳಿಂದ ಬಸ್ ಸೌಕರ್ಯಕ್ಕಾಗಿ ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಮಾಡುತ್ತಲೆ ಬಂದಿದ್ದರು. ಆದರೆ ಬಸ್ ಸೌಲಭ್ಯ ದೊರೆತಿರಲಿಲ್ಲ. ಬಸ್ ಇಲ್ಲದ ಕಾರಣ ಪ್ರತಿನಿತ್ಯ 5 ಕಿ.ಮೀ. ನಡೆದು ಶಾಲಾ ಮಕ್ಕಳು, ಗ್ರಾಮಸ್ಥರು ಮೂಡಿಗೆರೆಗೆ ತೆರಳುತ್ತಿದ್ದರು. ಹೊಯ್ಸಳಲು 200 ಜನರಿರುವ ಮಲೆನಾಡು ಭಾಗದ ಕುಗ್ರಾಮವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

16 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

20 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago