Advertisement
MIRROR FOCUS

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

Share

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಸಂಸ್ಥೆ ವತಿಯಿಂದ ಫೆಬ್ರವರಿ 17ರಂದು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು” ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮವು ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕ್ಷೇತ್ರದಲ್ಲಿ ತೊಡಗಿರುವ ಉದ್ಯಮಿಗಳಿಗೆ ವಿಶೇಷವಾಗಿ ಉಪಯುಕ್ತವಾಗಲಿದೆ.

ತರಬೇತಿಯ ವೇಳೆ ಕಾಳುಮೆಣಸು ಸೇರಿದಂತೆ ವಿವಿಧ ಸಂಬಾರು ಉತ್ಪನ್ನಗಳ ಸಂಸ್ಕರಣಾ ವಿಧಾನಗಳು, ಮೌಲ್ಯವರ್ಧನೆ ತಂತ್ರಜ್ಞಾನಗಳು, ರಫ್ತು ಗುಣಮಟ್ಟದ ಮಾನದಂಡಗಳು ಹಾಗೂ ಜಾಗತಿಕ ಮಾರುಕಟ್ಟೆ ಅವಕಾಶಗಳ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದರಿಂದ ರೈತರು ತಮ್ಮ ಉತ್ಪನ್ನಗಳಿಗೆ ಹೆಚ್ಚುವರಿ ಮೌಲ್ಯವನ್ನು ಸೇರಿಸಿ ಉತ್ತಮ ದರ ಪಡೆಯುವ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಗೆ ಪ್ರವೇಶಿಸುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಾರು ಬೆಳೆಗಳಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ, ಇಂತಹ ತರಬೇತಿ ಕಾರ್ಯಕ್ರಮಗಳು ರೈತರ ಆದಾಯ ಹೆಚ್ಚಳಕ್ಕೆ ಹಾಗೂ ರಫ್ತು ಸಾಮರ್ಥ್ಯ ವೃದ್ಧಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ.

A one-day training program on processing, value addition, and export of pepper and other spices will be held on February 17 at the Chikkamagaluru Zilla Panchayat hall, organized by Karnataka State Agricultural Produce Processing and Export Corporation. The program aims to help farmers, FPOs, and entrepreneurs learn export standards, value addition, and global market opportunities.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

13 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

14 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

17 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago