ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ ಪಕ್ಷಿಗಳು ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ. ಚಿಕ್ಕಸಂಗಮ ಪ್ರದೇಶವು ಜಗತ್ತಿನಲ್ಲಿಯೇ ಅತಿ ದೊಡ್ಡ ರಿವರ್ ಟರ್ನ್ ಪಕ್ಷಿಗಳ ವಂಶಾಭಿವೃದ್ಧಿ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಒಂದೇ ಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಗೂಡುಗಳು ಕಂಡುಬರುವುದು ವಿಶ್ವದಲ್ಲೇ ಅಪರೂಪದ ದಾಖಲೆ ಎಂದು ಅವರು ಹೇಳಿದ್ದಾರೆ.
ಚಿಕ್ಕಸಂಗಮ ಮೀಸಲು ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…