ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ ಪಕ್ಷಿಗಳು ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ. ಚಿಕ್ಕಸಂಗಮ ಪ್ರದೇಶವು ಜಗತ್ತಿನಲ್ಲಿಯೇ ಅತಿ ದೊಡ್ಡ ರಿವರ್ ಟರ್ನ್ ಪಕ್ಷಿಗಳ ವಂಶಾಭಿವೃದ್ಧಿ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಒಂದೇ ಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಗೂಡುಗಳು ಕಂಡುಬರುವುದು ವಿಶ್ವದಲ್ಲೇ ಅಪರೂಪದ ದಾಖಲೆ ಎಂದು ಅವರು ಹೇಳಿದ್ದಾರೆ.
ಚಿಕ್ಕಸಂಗಮ ಮೀಸಲು ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…