ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ ಪಕ್ಷಿಗಳು ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ. ಚಿಕ್ಕಸಂಗಮ ಪ್ರದೇಶವು ಜಗತ್ತಿನಲ್ಲಿಯೇ ಅತಿ ದೊಡ್ಡ ರಿವರ್ ಟರ್ನ್ ಪಕ್ಷಿಗಳ ವಂಶಾಭಿವೃದ್ಧಿ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಒಂದೇ ಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಗೂಡುಗಳು ಕಂಡುಬರುವುದು ವಿಶ್ವದಲ್ಲೇ ಅಪರೂಪದ ದಾಖಲೆ ಎಂದು ಅವರು ಹೇಳಿದ್ದಾರೆ.
ಚಿಕ್ಕಸಂಗಮ ಮೀಸಲು ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…