ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

February 28, 2025
7:34 AM
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ  ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ  ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಡ್ರೋನ್‌ ಮೊರೆ ಹೋಗಿದ್ದಾರೆ. (ಚಿತ್ರ: ಸಾಂದರ್ಭಿಕ)

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.………ಮುಂದೆ ಓದಿ……..

Advertisement

ಬಾಳೂರು ಮೀಸಲು ಅರಣ್ಯ ಪ್ರದೇಶದ ದೇವರಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿ 10 ಎಕರೆಕೆಗೆ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ನಾಶವಾಗಿದೆ. ಕುಂದೂರು ಸಮೀಪದ ಕಣೇಗದ್ದೆ ಗ್ರಾಮದಲ್ಲಿ ಕಾಫಿತೋಟಕ್ಕೆ ಬೆಂಕಿ ಬಿದ್ದು ಸುಮಾರು 15 ಎಕರೆ ಕಾಫಿ ತೋಟ ನಾಶವಾಗಿದೆ. ಮೂಡಿಗೆರೆ ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಕಳಸ ತಾಲೂಕು ಬಲಿಗೆ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯಾಧಿಕಾರಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು.

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ  ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ  ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಡ್ರೋನ್‌ಗಳ ಮೊರೆ ಹೋಗಿದ್ದಾರೆ. ಬೆಂಕಿಯಿಂದ ಕಾಡನ್ನ ರಕ್ಷಿಸಲು ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗುವುದು ಕಷ್ಟವಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror