ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

October 29, 2024
6:14 AM

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror