ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು.
ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.
ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…