ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು.
ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.
ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…