ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |

April 19, 2024
4:02 PM
ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಿತು. ಬೇಸಗೆ ರಜೆಯಲ್ಲಿ ಮಕ್ಕಳು ಸೃಜನಾತ್ಮಕವಾಗಿ ತೊಡಗಿಸಿಕೊಳ್ಳುವಂತೆ ಮಾಡಿದೆ ಈ ಶಿಬಿರ .

ಬೇಸಿಗೆ ರಜೆ. ಮಕ್ಕಳಿಗೆ ಏನು ಮಾಡುವುದು ಎನ್ನುವ ಚಿಂತೆಯಾದರೆ, ಪೋಷಕರಿಗೆಲ್ಲಾ ಮೊಬೈಲ್‌ನಿಂದ ಬಿಡಿಸುವುದು ಹೇಗೆ ಎನ್ನುವ ಚಿಂತೆ. ಈ ಎರಡೂ ಸಮಸ್ಯೆಗಳನ್ನು ದೂರ ಮಾಡುವುದು ಬೇಸಿಗೆ ಶಿಬಿರ. ಮಕ್ಕಳನ್ನು ರಜೆಯಲ್ಲಿ ಕ್ರಿಯಾಶೀಲರನ್ನಾಗಿಸುವ ಒಂದು ಪ್ರಯತ್ನ ಇದಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ ನಡೆದ ವಾರದ ಶಿಬಿರ ಇದು. ಮಕ್ಕಳ ಹಬ್ಬ.…ಮುಂದೆ ಓದಿ…..

Advertisement

ಸುಮಾರು 150 ಮಕ್ಕಳು ಪಂಜದಲ್ಲಿ ಕುಣಿದಾಡಿದರು, ಸಂಭ್ರಮಿಸಿದರು. ಚಿತ್ರ ಬಿಡಿಸಿದರು, ಬಣ್ಣ ಮೆತ್ತಿದರು, ಬಣ್ಣ ಹಾಕಿದರು, ಕುಣಿದರು, ಪ್ರಶ್ನಿಸಿದರು, ಮುಖವಾಡ ಮಾಡಿದರು, ಕಾಡಿನ ನಡುವೆ ಹೋದರು, ಬರಿದಾದ ಹೊಳೆಯನ್ನು ನೋಡಿದರು, ಪಕ್ಷಿಗಳ ಹಾಡನ್ನು ಕೇಳಿದರು… ಎಲ್ಲಾ ಮರೆತು ಮಕ್ಕಳು ಖುಷಿ ಪಟ್ಟರು. ಇದೇ ಮಕ್ಕಳ ಹಬ್ಬ. ವಾರಗಳ ಕಾಲ ನಡೆಯುತ್ತಿರುವ ಮಕ್ಕಳ ಹಬ್ಬ ಇದು.……ಮುಂದೆ ಓದಿ…..

ಸೃಜನಶೀಲ ಚಟುವಟಿಕೆಯನ್ನು ಮಕ್ಕಳಿಗೆ ನೀಡಿದರೆ ಮೊಬೈಲ್‌ ನಿಂದ ದೂರ ಇರುತ್ತಾರೆ. ಮಕ್ಕಳಒಳಗಿರುವ ಕಲೆ, ಆಸಕ್ತಿಯನ್ನು ಗುರುತಿಸುವುದೇ ಇಂದು ಪೋಷಕರ ಬಹುದೊಡ್ಡದಾದ ಕೆಲಸ

ಜೀವನ್‌ ಬೆಳ್ಳಾರೆ.
.

ಸುಳ್ಯ ತಾಲೂಕಿನ ಪಂಜದಲ್ಲಿ ಅದ್ವೈತ  ಮಕ್ಕಳ ಬೇಸಿಗೆ ಶಿಬಿರ ಆಯೋಜನೆಗೊಂಡಿದೆ.ಡ್ಯಾನ್ಸ್‌ ಎಂಡ್‌ ಬೀಟ್ಸ್‌ ಪಂಜ ಇವರ ನೇತೃತ್ವದಲ್ಲಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಶಿಬಿರ ಇದು. ಈ ಶಿಬಿರದಲ್ಲಿ ಜರ್ನಿ ಥೀಯೇಟರ್ ಮಂಗಳೂರು, ವಿದ್ದು ಉಚ್ಚಿಲ, ತಾರನಾಥ ಕೈರಂಗಳ, ಉಮೇಶ್‌ ಚನ್ನರಾಯಪಟ್ಟಣ, ಶಿವಗಿರಿ ಕಲ್ಲಡ್ಕ, ಮಧೂಸೂಧನ ಉಜಿರೆ, ಹರ್ಷಿತ್‌ ಮರ್ಕಂಜ, ಭುವನ್‌ ಕೈಕಂಬ, ರಾಜ್‌ ಮುಕೇಶ್‌ ಸುಳ್ಯ, ಸೋಮಶೇಖರ ನೇರಳ, ಶಿವರಾಮ ಕಲ್ಮಡ್ಕ, ಸತೀಶ್‌ ಕಳಂಜ, ಲಿಂಗಪ್ಪ ಬೆಳ್ಳಾರೆ, ಪದ್ಮನಾಬ ಕಲಾಸುಮ, ಶರತ್‌ ಮರ್ಗಿಲಡ್ಕ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸೇರಿದಂತೆ ಹಲವು ಸಂಸ್ಥೆಗಳು ಸಹಕರಿಸಿದ್ದವು.

ಜೀವನ್‌ ಬೆಳ್ಳಾರೆ  ಅವರು ಈ ಶಿಬಿರ ಆಯೋಜನೆಯ ಪ್ರಮುಖರು. ಡ್ಯಾನ್ಸ್‌ ತರಬೇತಿ ಮಾಡುವ ಜೀವನ್‌ ಅವರು ಮಾರ್ಚ್‌ ನಂತರ ಮಕ್ಕಳ ಚಟುವಟಿಕೆ ಏನು..? ಎಂಬುದು ಪ್ರತೀ ಬಾರಿಯ ಯೋಚನೆ  ಇರುತ್ತದೆ. ಮಕ್ಕಳು ಸದಾ ಚಟುವಟಿಕೆಯಲ್ಲಿ ಇರಬೇಕು. ಹೀಗಾಗಿ ಎಪ್ರಿಲ್‌ ಮೇಯಲ್ಲಿ ಮಕ್ಕಳಿಗಾಗಿ ಶಿಬಿರ ಮಾಡಬೇಕು ಎಂದು 2019 ರಲ್ಲಿ ಯೋಚನೆ ಬಂದಿತ್ತು. ಕಳೆದ ಎರಡು ವರ್ಷಗಳಿಂದ ಶಿಬಿರ ನಡೆಯುತ್ತಿದೆ. ಈ ವರ್ಷ 3 ಕಡೆ ಶಿಬಿರ ಆಯೋಜನೆ ಮಾಡಿದ್ದಾರೆ. ಮೂರು ಕಡೆ ಸೇರಿ ಒಟ್ಟು 300 ರಷ್ಟು ವಿದ್ಯಾರ್ಥಿಗಳು ಶಿಬಿರಕ್ಕೆ ಆಗಮಿಸಿದ್ದಾರೆ.…….ಮುಂದೆ ಓದಿ…..

ಶಿಬಿರದಲ್ಲಿ ವಿಶೇಷವಾಗಿ ರಂಗಕಲೆ, ರಂಗಗೀತೆ, ವಿವಿಧ ಬಗೆಯ ಕಲೆ, ಮಧುಬನಿ, ಕ್ರಾಫ್ಟ್‌, ಸೃಜನಶೀಲ ಕಲೆಗಳು, ಪರಿಸರ ವೀಕ್ಷಣೆ ಇತ್ಯಾದಿಗಳು ಇರುತ್ತದೆ, ಇದಕ್ಕಾಗಿ ಆಯಾ ಕ್ಷೇತ್ರದಲ್ಲಿ ತಜ್ಞರಾಗಿರುವ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಲಾಗುತ್ತದೆ ಎನ್ನುತ್ತಾರೆ ಜೀವನ್‌.

ಶಿಬಿರದಲ್ಲಿ 5-16 ವರ್ಷದೊಳಗಿನ ಮಕ್ಕಳು ಇದ್ದಾರೆ. ಮಕ್ಕಳ ಆಸಕ್ತಿ ಉತ್ತಮವಾಗಿದೆ. ಮಕ್ಕಳೊಂದಿಗೆ ಮಕ್ಕಳಾಗಿಯೇ ಇದ್ದಾಗ ಮಕ್ಕಳೂ ಹೆಚ್ಚು ತೊಡಗಿಸಿಕೊಳ್ಳುತ್ತಾರೆ ಎನ್ನುವ ಜೀವನ್, ಮಕ್ಕಳ ಇಂತಹ ಶಿಬಿರಗಳಲ್ಲಿ ತೊಡಗಿಸಿಕೊಂಡಾಗ ಮಕ್ಕಳು ಒಂದು ವಾರ ಮೊಬೈಲ್‌ ಹಿಡಿಯದ ಹಾಗೆ ಆಯಿತಲ್ಲಾ ಎನ್ನುವುದಕ್ಕಿಂತಲೂ ಮಕ್ಕಳಲ್ಲಿ ಸೃಜನಶೀಲ ಚಿಂತನೆ ಶುರುವಾಯಿತು ಎನ್ನುವುದು ಬಹುಮುಖ್ಯವಾಗುತ್ತದೆ ಎನ್ನುತ್ತಾರೆ.…….ಮುಂದೆ ಓದಿ…..

ಈ ಬಾರಿ ಮೂರು ಶಿಬಿರದಲ್ಲಿ ಗಮನಿಸಿದ್ದೇನೆ, ಎಲ್ಲಾ ಮಕ್ಕಳೂ ಕುತೂಹಲದಿಂದ ಇದ್ದಾರೆ. ಮಕ್ಕಳಲ್ಲಿ ಆಸಕ್ತಿ ಇದೆ. ಎಲ್ಲಾ ಮಕ್ಕಳಿಗೂ ಮೊಬೈಲ್‌ನಲ್ಲಿ ಆಸಕ್ತಿ ಇದೆ ನಿಜ. ಆದರೆ ಅದರಿಂದ ದೂರ ಮಾಡುವುದು, ಮೊಬೈಲ್‌ ದೂರುವುದರ ಬದಲಾಗಿ ಮಕ್ಕಳ ಆಸಕ್ತಿಯನ್ನು ಬೆಳೆಸಬೇಕು, ಬೆಳೆಸುವ ಹಾಗೆ ಪೋಷಕರು ಮಾಡಬೇಕಿದೆ.ಅಂತಹ ಗುರುತಿಸುವಿಕೆ ಹಾಗೂ ಆಸಕ್ತಿಯನ್ನು ಈ ಶಿಬಿರದಲ್ಲಿ ಮಾಡಲಾಗುತ್ತಿದೆ ಅಷ್ಟೇ…. ಎನ್ನುತ್ತಾರೆ ಜೀವನ್‌ ಬೆಳ್ಳಾರೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror