Advertisement
ಅನುಕ್ರಮ

ಚಿಲಿಪಿಲಿ | ನೀಲಿ ನೊಣ ಹಿಡುಕ |

Share

ನೀಲಿ ನೊಣ ಹಿಡುಕ (Tickle blue fly catcher.Cyornis tickelliae Blyth.)  ಎರಡು ಹಕ್ಕಿಗಳು ವಿರುದ್ಧ ದಿಕ್ಕುಗಳಿಂದ ಅರಚುತ್ತಿದ್ದರೆ ಆಹಾರ ಹುಡುಕಿ ಕೊಂಡು ಬಂದ ಹಕ್ಕಿಗಳು ಪೂರ ಸಂಶಯದಿಂದ ಅತ್ತಿತ್ತ ನೋಡಲಾರಂಭಿಸಿದವು. ಹಕ್ಕಿಗಳ ಭಾಷೆ ತಿಳಿದವರಿಗೆ ಅರ್ಥವಾದೀತು ಮರಿಗಳ ರಕ್ಷಣೆಗೆ ಪಣತೊಟ್ಟ ಹಕ್ಕಿಗಳ ಉಪಾಯವೆಂದು..ಇದರ ಸಿಳ್ಳಿನಿಂದಲೇ ಹಕ್ಕಿಯ ಇರುವಿಕೆ ಗೊತ್ತಾಗುತ್ತದೆ.

Advertisement
Advertisement
ನೀಲಿ ನೊಣ ಹಿಡುಕ , ನೋಡಲು ಗುಬ್ಬಚ್ಚಿ ಗಾತ್ರದ ಹಕ್ಕಿಯಾಗಿದೆ( 14 cm) ಮೈ ಕಪ್ಪು ಮಿಶ್ರಿತ ನೀಲಿ ಬಣ್ಣ, ಹಣೆಯ ಮೇಲೆ ತೆಳು ನೀಲಿ ಪಟ್ಟೆಯಿದೆ. ಕುತ್ತಿಗೆ ಮತ್ತು ಎದೆ ಕಿತ್ತಳೆ ಬಣ್ಣ, ಹೊಟ್ಟೆಯ ಭಾಗ ಬಿಳಿ ಬಣ್ಣವಿದ್ದು, ಬಾಲದ ಕೆಳ ಭಾಗ ಕಿತ್ತಳೆ ಬಣ್ಣವಿರುತ್ತದೆ. ಪರ್ವತ ಹಾಗೂ ಬೆಟ್ಟಗುಡ್ಡಗಳ ತಪ್ಪಲುಗಳಲ್ಲಿ ಕಾಣಸಿಗುತ್ತದೆ. ನೀರಿನ ಆಶ್ರಯ ಇರುವ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ. ಕೀಟಗಳೇ ಪ್ರಧಾನ ಆಹಾರವಾಗಿದೆ.
ಮಾರ್ಚ್ ನಿಂದ ಆಗಸ್ಟ್ ವರೆಗೆ ಗೂಡು ಕಟ್ಟುವ ಈ ಹಕ್ಕಿಗಳು ಒಮ್ಮೆಗೆ 3 ರಿಂದ 5 ಮೊಟ್ಟೆಗಳನ್ನಿಡುತ್ತದೆ. ಇವುಗಳು ಮಕ್ಕಳ ಕುರಿತು ತುಂಬಾ ಕಾಳಜಿ ವಹಿಸುತ್ತದೆ.‌ ಅವುಗಳಿಗೆ ಆಹಾರವನ್ನು ಬಹಳ ಜಾಗ್ರತೆಯಿಂದ ತಿನ್ನಿಸುತ್ತವೆ. ಈ ಹಕ್ಕಿ ನೋಡಲಷ್ಟೇ ಗಮನ ಸೆಳೆಯುವುದಲ್ಲ , ತನ್ನ ಇಂಪಾದ ದನಿಯಲ್ಲಿ ಸಿಳ್ಳಿನ ರಾಗಾಲಾಪನೆ ಮಾಡುತ್ತಾ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತವೆ. ಭಾರತ, ಬಾಂಗ್ಲಾದೇಶ,ಶ್ರೀ ಲಂಕಾ, ಬರ್ಮಾ ದೇಶಗಳಲ್ಲಿ ಈ ಹಕ್ಕಿಗಳು ಕಂಡು ಬರುತ್ತವೆ.
ಬರಹ:
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

30 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

36 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

44 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago