Advertisement
ಅನುಕ್ರಮ

ಚಿಲಿಪಿಲಿ | ನೀಲಿ ನೊಣ ಹಿಡುಕ |

Share

ನೀಲಿ ನೊಣ ಹಿಡುಕ (Tickle blue fly catcher.Cyornis tickelliae Blyth.)  ಎರಡು ಹಕ್ಕಿಗಳು ವಿರುದ್ಧ ದಿಕ್ಕುಗಳಿಂದ ಅರಚುತ್ತಿದ್ದರೆ ಆಹಾರ ಹುಡುಕಿ ಕೊಂಡು ಬಂದ ಹಕ್ಕಿಗಳು ಪೂರ ಸಂಶಯದಿಂದ ಅತ್ತಿತ್ತ ನೋಡಲಾರಂಭಿಸಿದವು. ಹಕ್ಕಿಗಳ ಭಾಷೆ ತಿಳಿದವರಿಗೆ ಅರ್ಥವಾದೀತು ಮರಿಗಳ ರಕ್ಷಣೆಗೆ ಪಣತೊಟ್ಟ ಹಕ್ಕಿಗಳ ಉಪಾಯವೆಂದು..ಇದರ ಸಿಳ್ಳಿನಿಂದಲೇ ಹಕ್ಕಿಯ ಇರುವಿಕೆ ಗೊತ್ತಾಗುತ್ತದೆ.

ನೀಲಿ ನೊಣ ಹಿಡುಕ , ನೋಡಲು ಗುಬ್ಬಚ್ಚಿ ಗಾತ್ರದ ಹಕ್ಕಿಯಾಗಿದೆ( 14 cm) ಮೈ ಕಪ್ಪು ಮಿಶ್ರಿತ ನೀಲಿ ಬಣ್ಣ, ಹಣೆಯ ಮೇಲೆ ತೆಳು ನೀಲಿ ಪಟ್ಟೆಯಿದೆ. ಕುತ್ತಿಗೆ ಮತ್ತು ಎದೆ ಕಿತ್ತಳೆ ಬಣ್ಣ, ಹೊಟ್ಟೆಯ ಭಾಗ ಬಿಳಿ ಬಣ್ಣವಿದ್ದು, ಬಾಲದ ಕೆಳ ಭಾಗ ಕಿತ್ತಳೆ ಬಣ್ಣವಿರುತ್ತದೆ. ಪರ್ವತ ಹಾಗೂ ಬೆಟ್ಟಗುಡ್ಡಗಳ ತಪ್ಪಲುಗಳಲ್ಲಿ ಕಾಣಸಿಗುತ್ತದೆ. ನೀರಿನ ಆಶ್ರಯ ಇರುವ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ. ಕೀಟಗಳೇ ಪ್ರಧಾನ ಆಹಾರವಾಗಿದೆ.
ಮಾರ್ಚ್ ನಿಂದ ಆಗಸ್ಟ್ ವರೆಗೆ ಗೂಡು ಕಟ್ಟುವ ಈ ಹಕ್ಕಿಗಳು ಒಮ್ಮೆಗೆ 3 ರಿಂದ 5 ಮೊಟ್ಟೆಗಳನ್ನಿಡುತ್ತದೆ. ಇವುಗಳು ಮಕ್ಕಳ ಕುರಿತು ತುಂಬಾ ಕಾಳಜಿ ವಹಿಸುತ್ತದೆ.‌ ಅವುಗಳಿಗೆ ಆಹಾರವನ್ನು ಬಹಳ ಜಾಗ್ರತೆಯಿಂದ ತಿನ್ನಿಸುತ್ತವೆ. ಈ ಹಕ್ಕಿ ನೋಡಲಷ್ಟೇ ಗಮನ ಸೆಳೆಯುವುದಲ್ಲ , ತನ್ನ ಇಂಪಾದ ದನಿಯಲ್ಲಿ ಸಿಳ್ಳಿನ ರಾಗಾಲಾಪನೆ ಮಾಡುತ್ತಾ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತವೆ. ಭಾರತ, ಬಾಂಗ್ಲಾದೇಶ,ಶ್ರೀ ಲಂಕಾ, ಬರ್ಮಾ ದೇಶಗಳಲ್ಲಿ ಈ ಹಕ್ಕಿಗಳು ಕಂಡು ಬರುತ್ತವೆ.
ಬರಹ:
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

16 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

18 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago