Advertisement
ಅನುಕ್ರಮ

ಚಿಲಿಪಿಲಿ | ನೀಲಿ ನೊಣ ಹಿಡುಕ |

Share

ನೀಲಿ ನೊಣ ಹಿಡುಕ (Tickle blue fly catcher.Cyornis tickelliae Blyth.)  ಎರಡು ಹಕ್ಕಿಗಳು ವಿರುದ್ಧ ದಿಕ್ಕುಗಳಿಂದ ಅರಚುತ್ತಿದ್ದರೆ ಆಹಾರ ಹುಡುಕಿ ಕೊಂಡು ಬಂದ ಹಕ್ಕಿಗಳು ಪೂರ ಸಂಶಯದಿಂದ ಅತ್ತಿತ್ತ ನೋಡಲಾರಂಭಿಸಿದವು. ಹಕ್ಕಿಗಳ ಭಾಷೆ ತಿಳಿದವರಿಗೆ ಅರ್ಥವಾದೀತು ಮರಿಗಳ ರಕ್ಷಣೆಗೆ ಪಣತೊಟ್ಟ ಹಕ್ಕಿಗಳ ಉಪಾಯವೆಂದು..ಇದರ ಸಿಳ್ಳಿನಿಂದಲೇ ಹಕ್ಕಿಯ ಇರುವಿಕೆ ಗೊತ್ತಾಗುತ್ತದೆ.

ನೀಲಿ ನೊಣ ಹಿಡುಕ , ನೋಡಲು ಗುಬ್ಬಚ್ಚಿ ಗಾತ್ರದ ಹಕ್ಕಿಯಾಗಿದೆ( 14 cm) ಮೈ ಕಪ್ಪು ಮಿಶ್ರಿತ ನೀಲಿ ಬಣ್ಣ, ಹಣೆಯ ಮೇಲೆ ತೆಳು ನೀಲಿ ಪಟ್ಟೆಯಿದೆ. ಕುತ್ತಿಗೆ ಮತ್ತು ಎದೆ ಕಿತ್ತಳೆ ಬಣ್ಣ, ಹೊಟ್ಟೆಯ ಭಾಗ ಬಿಳಿ ಬಣ್ಣವಿದ್ದು, ಬಾಲದ ಕೆಳ ಭಾಗ ಕಿತ್ತಳೆ ಬಣ್ಣವಿರುತ್ತದೆ. ಪರ್ವತ ಹಾಗೂ ಬೆಟ್ಟಗುಡ್ಡಗಳ ತಪ್ಪಲುಗಳಲ್ಲಿ ಕಾಣಸಿಗುತ್ತದೆ. ನೀರಿನ ಆಶ್ರಯ ಇರುವ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ. ಕೀಟಗಳೇ ಪ್ರಧಾನ ಆಹಾರವಾಗಿದೆ.
Advertisement
ಮಾರ್ಚ್ ನಿಂದ ಆಗಸ್ಟ್ ವರೆಗೆ ಗೂಡು ಕಟ್ಟುವ ಈ ಹಕ್ಕಿಗಳು ಒಮ್ಮೆಗೆ 3 ರಿಂದ 5 ಮೊಟ್ಟೆಗಳನ್ನಿಡುತ್ತದೆ. ಇವುಗಳು ಮಕ್ಕಳ ಕುರಿತು ತುಂಬಾ ಕಾಳಜಿ ವಹಿಸುತ್ತದೆ.‌ ಅವುಗಳಿಗೆ ಆಹಾರವನ್ನು ಬಹಳ ಜಾಗ್ರತೆಯಿಂದ ತಿನ್ನಿಸುತ್ತವೆ. ಈ ಹಕ್ಕಿ ನೋಡಲಷ್ಟೇ ಗಮನ ಸೆಳೆಯುವುದಲ್ಲ , ತನ್ನ ಇಂಪಾದ ದನಿಯಲ್ಲಿ ಸಿಳ್ಳಿನ ರಾಗಾಲಾಪನೆ ಮಾಡುತ್ತಾ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತವೆ. ಭಾರತ, ಬಾಂಗ್ಲಾದೇಶ,ಶ್ರೀ ಲಂಕಾ, ಬರ್ಮಾ ದೇಶಗಳಲ್ಲಿ ಈ ಹಕ್ಕಿಗಳು ಕಂಡು ಬರುತ್ತವೆ.
ಬರಹ:
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

14 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

16 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

22 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago