Advertisement
ಅಂಕಣ

ಚಿಲಿಪಿಲಿ | ನೀಲಿ ನೊಣ ಹಿಡುಕ |

Share

ನೀಲಿ ನೊಣ ಹಿಡುಕ (Tickle blue fly catcher.Cyornis tickelliae Blyth.)  ಎರಡು ಹಕ್ಕಿಗಳು ವಿರುದ್ಧ ದಿಕ್ಕುಗಳಿಂದ ಅರಚುತ್ತಿದ್ದರೆ ಆಹಾರ ಹುಡುಕಿ ಕೊಂಡು ಬಂದ ಹಕ್ಕಿಗಳು ಪೂರ ಸಂಶಯದಿಂದ ಅತ್ತಿತ್ತ ನೋಡಲಾರಂಭಿಸಿದವು. ಹಕ್ಕಿಗಳ ಭಾಷೆ ತಿಳಿದವರಿಗೆ ಅರ್ಥವಾದೀತು ಮರಿಗಳ ರಕ್ಷಣೆಗೆ ಪಣತೊಟ್ಟ ಹಕ್ಕಿಗಳ ಉಪಾಯವೆಂದು..ಇದರ ಸಿಳ್ಳಿನಿಂದಲೇ ಹಕ್ಕಿಯ ಇರುವಿಕೆ ಗೊತ್ತಾಗುತ್ತದೆ.

Advertisement
Advertisement
ನೀಲಿ ನೊಣ ಹಿಡುಕ , ನೋಡಲು ಗುಬ್ಬಚ್ಚಿ ಗಾತ್ರದ ಹಕ್ಕಿಯಾಗಿದೆ( 14 cm) ಮೈ ಕಪ್ಪು ಮಿಶ್ರಿತ ನೀಲಿ ಬಣ್ಣ, ಹಣೆಯ ಮೇಲೆ ತೆಳು ನೀಲಿ ಪಟ್ಟೆಯಿದೆ. ಕುತ್ತಿಗೆ ಮತ್ತು ಎದೆ ಕಿತ್ತಳೆ ಬಣ್ಣ, ಹೊಟ್ಟೆಯ ಭಾಗ ಬಿಳಿ ಬಣ್ಣವಿದ್ದು, ಬಾಲದ ಕೆಳ ಭಾಗ ಕಿತ್ತಳೆ ಬಣ್ಣವಿರುತ್ತದೆ. ಪರ್ವತ ಹಾಗೂ ಬೆಟ್ಟಗುಡ್ಡಗಳ ತಪ್ಪಲುಗಳಲ್ಲಿ ಕಾಣಸಿಗುತ್ತದೆ. ನೀರಿನ ಆಶ್ರಯ ಇರುವ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ. ಕೀಟಗಳೇ ಪ್ರಧಾನ ಆಹಾರವಾಗಿದೆ.
Advertisement
ಮಾರ್ಚ್ ನಿಂದ ಆಗಸ್ಟ್ ವರೆಗೆ ಗೂಡು ಕಟ್ಟುವ ಈ ಹಕ್ಕಿಗಳು ಒಮ್ಮೆಗೆ 3 ರಿಂದ 5 ಮೊಟ್ಟೆಗಳನ್ನಿಡುತ್ತದೆ. ಇವುಗಳು ಮಕ್ಕಳ ಕುರಿತು ತುಂಬಾ ಕಾಳಜಿ ವಹಿಸುತ್ತದೆ.‌ ಅವುಗಳಿಗೆ ಆಹಾರವನ್ನು ಬಹಳ ಜಾಗ್ರತೆಯಿಂದ ತಿನ್ನಿಸುತ್ತವೆ. ಈ ಹಕ್ಕಿ ನೋಡಲಷ್ಟೇ ಗಮನ ಸೆಳೆಯುವುದಲ್ಲ , ತನ್ನ ಇಂಪಾದ ದನಿಯಲ್ಲಿ ಸಿಳ್ಳಿನ ರಾಗಾಲಾಪನೆ ಮಾಡುತ್ತಾ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತವೆ. ಭಾರತ, ಬಾಂಗ್ಲಾದೇಶ,ಶ್ರೀ ಲಂಕಾ, ಬರ್ಮಾ ದೇಶಗಳಲ್ಲಿ ಈ ಹಕ್ಕಿಗಳು ಕಂಡು ಬರುತ್ತವೆ.
ಬರಹ:
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ..
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

3 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

4 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

8 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago