Advertisement
ಅನುಕ್ರಮ

ಚಿಲಿಪಿಲಿ | ಪೇರಳೆ ಗಿಡದಲ್ಲಿ ಕಾಣುವ “ಕೆಮ್ಮಂಡೆ ಗಿಳಿ”…!

Share
ಪೇರಳೆ ಗಿಡದ ತುಂಬಾ ಕಾಯಿ, ಹಣ್ಣುಗಳು. ದಿನವಿಡೀ ಹಕ್ಕಿಗಳದ್ದೇ ಕಾರುಬಾರು.  ಹಲವು ಜಾತಿಯ ಹಕ್ಕಿಗಳು ಒಂದೇ ಮರದಲ್ಲಿ ಕಾಣ ಸಿಕ್ಕರೆ ಎಷ್ಟು ಖುಷಿಯಲ್ಲವೇ? ಹಾಗೆ ಕಂಡು ಬಂದ  ಹಕ್ಕಿಗಳಲ್ಲಿ ತುಂಬಾ ವಿಶೇಷವಾಗಿ ಕಂಡದ್ದು  ಈ  ಗಿಳಿರಾಮ. ಕೆಮ್ಮಂಡೆ ಗಿಳಿ.
ಉಳಿದ ಗಿಳಿಗಳಿಗೆ  ಹೋಲಿಸಿದರೆ ಇದರ ಗಾತ್ರ ಸ್ವಲ್ಪ ಚಿಕ್ಕದು(36c.m).  ಮೈನಾ ಹಕ್ಕಿಯ ಗಾತ್ರ, ತಲೆ  ಕೆಂಪಾಗಿದ್ದು, ಉದ್ದವಾಗಿ ಚೂಪಾಗಿರುವ ಬಾಲವಿದೆ.  ನೀಲಿ,  ಕೆಂಪು ಬಣ್ಣದ ತಲೆಯಿಂದಾಗಿ ಸುಲಭವಾಗಿ ಗುರುತಿಸ ಬಹುದು. ಭಾರತ, ಬಾಂಗ್ಲಾ, ಪಾಕಿಸ್ತಾನ, ಶ್ರೀಲಂಕಾ ದೇಶಗಳಲ್ಲಿ ಕಂಡು ಬರುತ್ತವೆ.  ಬಯಲುಸೀಮೆ ಹಾಗೂ ಮಲೆನಾಡಿಗೆ ಸ್ಥಳೀಯವಾಗಿ ವಲಸೆ ಹೋಗುವ ಹಕ್ಕಿಗಳಾಗಿವೆ.  ಗುಂಪು ಗುಂಪಾಗಿಯೇ ಕಂಡುಬರುತ್ತವೆ.
ಹಣ್ಣು ಕಾಯಿಗಳೇ ಇವುಗಳ ಆಹಾರ.  ಮರದ ಪೊಟರೆಗಳಲ್ಲಿ  ಅಥವಾ ಮರದ ಮೇಲೆ ಗೂಡು ಕಟ್ಟಿ ಮೊಟ್ಟೆಗಳನ್ನಿಡುತ್ತವೆ. ಕೆಲವೊಮ್ಮೆ ದೊಡ್ಡ ಪೊಟರೆಗಳಿದ್ದಲ್ಲಿ ಸಾಮೂಹಿಕವಾಗಿ  ಮೊಟ್ಟೆಗಳನ್ನಿಟ್ಟು ಮರಿ ಮಾಡುವುದು ಇವುಗಳ ವಿಶೇಷತೆ.
ಸುಂದರವಾಗಿರುವ ಈ ಹಕ್ಕಿಯನ್ನು ಪಂಜರದಲ್ಲೂ ಸಾಕುತ್ತಾರೆ.  ಮಾರುಕಟ್ಟೆಯಲ್ಲಿ ಈ ಹಕ್ಕಿಯ ಸಾಕಾಣಿಕೆ ಲಾಭದಾಯಕ ಉದ್ಯಮವಾಗಿದೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

4 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

18 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

19 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

19 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

19 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

19 hours ago