Advertisement
ಅನುಕ್ರಮ

ಚಿಲಿಪಿಲಿ | ಪೇರಳೆ ಗಿಡದಲ್ಲಿ ಕಾಣುವ “ಕೆಮ್ಮಂಡೆ ಗಿಳಿ”…!

Share
ಪೇರಳೆ ಗಿಡದ ತುಂಬಾ ಕಾಯಿ, ಹಣ್ಣುಗಳು. ದಿನವಿಡೀ ಹಕ್ಕಿಗಳದ್ದೇ ಕಾರುಬಾರು.  ಹಲವು ಜಾತಿಯ ಹಕ್ಕಿಗಳು ಒಂದೇ ಮರದಲ್ಲಿ ಕಾಣ ಸಿಕ್ಕರೆ ಎಷ್ಟು ಖುಷಿಯಲ್ಲವೇ? ಹಾಗೆ ಕಂಡು ಬಂದ  ಹಕ್ಕಿಗಳಲ್ಲಿ ತುಂಬಾ ವಿಶೇಷವಾಗಿ ಕಂಡದ್ದು  ಈ  ಗಿಳಿರಾಮ. ಕೆಮ್ಮಂಡೆ ಗಿಳಿ.
ಉಳಿದ ಗಿಳಿಗಳಿಗೆ  ಹೋಲಿಸಿದರೆ ಇದರ ಗಾತ್ರ ಸ್ವಲ್ಪ ಚಿಕ್ಕದು(36c.m).  ಮೈನಾ ಹಕ್ಕಿಯ ಗಾತ್ರ, ತಲೆ  ಕೆಂಪಾಗಿದ್ದು, ಉದ್ದವಾಗಿ ಚೂಪಾಗಿರುವ ಬಾಲವಿದೆ.  ನೀಲಿ,  ಕೆಂಪು ಬಣ್ಣದ ತಲೆಯಿಂದಾಗಿ ಸುಲಭವಾಗಿ ಗುರುತಿಸ ಬಹುದು. ಭಾರತ, ಬಾಂಗ್ಲಾ, ಪಾಕಿಸ್ತಾನ, ಶ್ರೀಲಂಕಾ ದೇಶಗಳಲ್ಲಿ ಕಂಡು ಬರುತ್ತವೆ.  ಬಯಲುಸೀಮೆ ಹಾಗೂ ಮಲೆನಾಡಿಗೆ ಸ್ಥಳೀಯವಾಗಿ ವಲಸೆ ಹೋಗುವ ಹಕ್ಕಿಗಳಾಗಿವೆ.  ಗುಂಪು ಗುಂಪಾಗಿಯೇ ಕಂಡುಬರುತ್ತವೆ.
ಹಣ್ಣು ಕಾಯಿಗಳೇ ಇವುಗಳ ಆಹಾರ.  ಮರದ ಪೊಟರೆಗಳಲ್ಲಿ  ಅಥವಾ ಮರದ ಮೇಲೆ ಗೂಡು ಕಟ್ಟಿ ಮೊಟ್ಟೆಗಳನ್ನಿಡುತ್ತವೆ. ಕೆಲವೊಮ್ಮೆ ದೊಡ್ಡ ಪೊಟರೆಗಳಿದ್ದಲ್ಲಿ ಸಾಮೂಹಿಕವಾಗಿ  ಮೊಟ್ಟೆಗಳನ್ನಿಟ್ಟು ಮರಿ ಮಾಡುವುದು ಇವುಗಳ ವಿಶೇಷತೆ.
ಸುಂದರವಾಗಿರುವ ಈ ಹಕ್ಕಿಯನ್ನು ಪಂಜರದಲ್ಲೂ ಸಾಕುತ್ತಾರೆ.  ಮಾರುಕಟ್ಟೆಯಲ್ಲಿ ಈ ಹಕ್ಕಿಯ ಸಾಕಾಣಿಕೆ ಲಾಭದಾಯಕ ಉದ್ಯಮವಾಗಿದೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 hour ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago