Advertisement
ಅಂಕಣ

ಚಿಲಿಪಿಲಿ | ಪೇರಳೆ ಗಿಡದಲ್ಲಿ ಕಾಣುವ “ಕೆಮ್ಮಂಡೆ ಗಿಳಿ”…!

Share
ಪೇರಳೆ ಗಿಡದ ತುಂಬಾ ಕಾಯಿ, ಹಣ್ಣುಗಳು. ದಿನವಿಡೀ ಹಕ್ಕಿಗಳದ್ದೇ ಕಾರುಬಾರು.  ಹಲವು ಜಾತಿಯ ಹಕ್ಕಿಗಳು ಒಂದೇ ಮರದಲ್ಲಿ ಕಾಣ ಸಿಕ್ಕರೆ ಎಷ್ಟು ಖುಷಿಯಲ್ಲವೇ? ಹಾಗೆ ಕಂಡು ಬಂದ  ಹಕ್ಕಿಗಳಲ್ಲಿ ತುಂಬಾ ವಿಶೇಷವಾಗಿ ಕಂಡದ್ದು  ಈ  ಗಿಳಿರಾಮ. ಕೆಮ್ಮಂಡೆ ಗಿಳಿ.
ಉಳಿದ ಗಿಳಿಗಳಿಗೆ  ಹೋಲಿಸಿದರೆ ಇದರ ಗಾತ್ರ ಸ್ವಲ್ಪ ಚಿಕ್ಕದು(36c.m).  ಮೈನಾ ಹಕ್ಕಿಯ ಗಾತ್ರ, ತಲೆ  ಕೆಂಪಾಗಿದ್ದು, ಉದ್ದವಾಗಿ ಚೂಪಾಗಿರುವ ಬಾಲವಿದೆ.  ನೀಲಿ,  ಕೆಂಪು ಬಣ್ಣದ ತಲೆಯಿಂದಾಗಿ ಸುಲಭವಾಗಿ ಗುರುತಿಸ ಬಹುದು. ಭಾರತ, ಬಾಂಗ್ಲಾ, ಪಾಕಿಸ್ತಾನ, ಶ್ರೀಲಂಕಾ ದೇಶಗಳಲ್ಲಿ ಕಂಡು ಬರುತ್ತವೆ.  ಬಯಲುಸೀಮೆ ಹಾಗೂ ಮಲೆನಾಡಿಗೆ ಸ್ಥಳೀಯವಾಗಿ ವಲಸೆ ಹೋಗುವ ಹಕ್ಕಿಗಳಾಗಿವೆ.  ಗುಂಪು ಗುಂಪಾಗಿಯೇ ಕಂಡುಬರುತ್ತವೆ.
ಹಣ್ಣು ಕಾಯಿಗಳೇ ಇವುಗಳ ಆಹಾರ.  ಮರದ ಪೊಟರೆಗಳಲ್ಲಿ  ಅಥವಾ ಮರದ ಮೇಲೆ ಗೂಡು ಕಟ್ಟಿ ಮೊಟ್ಟೆಗಳನ್ನಿಡುತ್ತವೆ. ಕೆಲವೊಮ್ಮೆ ದೊಡ್ಡ ಪೊಟರೆಗಳಿದ್ದಲ್ಲಿ ಸಾಮೂಹಿಕವಾಗಿ  ಮೊಟ್ಟೆಗಳನ್ನಿಟ್ಟು ಮರಿ ಮಾಡುವುದು ಇವುಗಳ ವಿಶೇಷತೆ.
ಸುಂದರವಾಗಿರುವ ಈ ಹಕ್ಕಿಯನ್ನು ಪಂಜರದಲ್ಲೂ ಸಾಕುತ್ತಾರೆ.  ಮಾರುಕಟ್ಟೆಯಲ್ಲಿ ಈ ಹಕ್ಕಿಯ ಸಾಕಾಣಿಕೆ ಲಾಭದಾಯಕ ಉದ್ಯಮವಾಗಿದೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

48 mins ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

2 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

2 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

3 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

3 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

6 hours ago