Advertisement
ಅನುಕ್ರಮ

ಚಿಲಿಪಿಲಿ | ಪೇರಳೆ ಗಿಡದಲ್ಲಿ ಕಾಣುವ “ಕೆಮ್ಮಂಡೆ ಗಿಳಿ”…!

Share
ಪೇರಳೆ ಗಿಡದ ತುಂಬಾ ಕಾಯಿ, ಹಣ್ಣುಗಳು. ದಿನವಿಡೀ ಹಕ್ಕಿಗಳದ್ದೇ ಕಾರುಬಾರು.  ಹಲವು ಜಾತಿಯ ಹಕ್ಕಿಗಳು ಒಂದೇ ಮರದಲ್ಲಿ ಕಾಣ ಸಿಕ್ಕರೆ ಎಷ್ಟು ಖುಷಿಯಲ್ಲವೇ? ಹಾಗೆ ಕಂಡು ಬಂದ  ಹಕ್ಕಿಗಳಲ್ಲಿ ತುಂಬಾ ವಿಶೇಷವಾಗಿ ಕಂಡದ್ದು  ಈ  ಗಿಳಿರಾಮ. ಕೆಮ್ಮಂಡೆ ಗಿಳಿ.
ಉಳಿದ ಗಿಳಿಗಳಿಗೆ  ಹೋಲಿಸಿದರೆ ಇದರ ಗಾತ್ರ ಸ್ವಲ್ಪ ಚಿಕ್ಕದು(36c.m).  ಮೈನಾ ಹಕ್ಕಿಯ ಗಾತ್ರ, ತಲೆ  ಕೆಂಪಾಗಿದ್ದು, ಉದ್ದವಾಗಿ ಚೂಪಾಗಿರುವ ಬಾಲವಿದೆ.  ನೀಲಿ,  ಕೆಂಪು ಬಣ್ಣದ ತಲೆಯಿಂದಾಗಿ ಸುಲಭವಾಗಿ ಗುರುತಿಸ ಬಹುದು. ಭಾರತ, ಬಾಂಗ್ಲಾ, ಪಾಕಿಸ್ತಾನ, ಶ್ರೀಲಂಕಾ ದೇಶಗಳಲ್ಲಿ ಕಂಡು ಬರುತ್ತವೆ.  ಬಯಲುಸೀಮೆ ಹಾಗೂ ಮಲೆನಾಡಿಗೆ ಸ್ಥಳೀಯವಾಗಿ ವಲಸೆ ಹೋಗುವ ಹಕ್ಕಿಗಳಾಗಿವೆ.  ಗುಂಪು ಗುಂಪಾಗಿಯೇ ಕಂಡುಬರುತ್ತವೆ.
ಹಣ್ಣು ಕಾಯಿಗಳೇ ಇವುಗಳ ಆಹಾರ.  ಮರದ ಪೊಟರೆಗಳಲ್ಲಿ  ಅಥವಾ ಮರದ ಮೇಲೆ ಗೂಡು ಕಟ್ಟಿ ಮೊಟ್ಟೆಗಳನ್ನಿಡುತ್ತವೆ. ಕೆಲವೊಮ್ಮೆ ದೊಡ್ಡ ಪೊಟರೆಗಳಿದ್ದಲ್ಲಿ ಸಾಮೂಹಿಕವಾಗಿ  ಮೊಟ್ಟೆಗಳನ್ನಿಟ್ಟು ಮರಿ ಮಾಡುವುದು ಇವುಗಳ ವಿಶೇಷತೆ.
ಸುಂದರವಾಗಿರುವ ಈ ಹಕ್ಕಿಯನ್ನು ಪಂಜರದಲ್ಲೂ ಸಾಕುತ್ತಾರೆ.  ಮಾರುಕಟ್ಟೆಯಲ್ಲಿ ಈ ಹಕ್ಕಿಯ ಸಾಕಾಣಿಕೆ ಲಾಭದಾಯಕ ಉದ್ಯಮವಾಗಿದೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

19 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

43 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

5 hours ago