Advertisement
ಅನುಕ್ರಮ

ಚಿಲಿಪಿಲಿ | ವಲಸೆ ಹಕ್ಕಿ ಯುರೋಪಿಯನ್ ಜೇನುನೊಣ ಬಾಕ..! |

Share

ಸಾಮಾನ್ಯ ಜೇನುನೊಣ ಬಾಕವೆಂದೇ ಈ ಫೋಟೋಗಳನ್ನು ಕ್ಲಿಕ್ಕಿಸಿದ್ದು. ಆಮೇಲೆ ಕಂಪ್ಯೂಟರ್ ನಲ್ಲಿ ದೊಡ್ಡದು ಮಾಡಿ ನೋಡಿದಾಗಲೇ ತಿಳಿದದ್ದು ಇದು ನಾವು ನಿತ್ಯ ನೋಡುವ ಜೇನುನೊಣಬಾಕ ಅಲ್ಲ, ಇವುಗಳು ಯುರೋಪಿಯನ್ ಜೇನುನೊಣಬಾಕಗಳೆಂದು…!

ಇವುಗಳು ವಲಸೆ ಹಕ್ಕಿಗಳು. ಚಳಿಗಾಲದಲ್ಲಿ ಉತ್ತರದಿಂದ ದಕ್ಷಿಣಕ್ಕೆ ಚಳಿ ಕಡಿಮೆ ಇರುವ ಪ್ರದೇಶಕ್ಕೆ ವಲಸೆ ಬರುತ್ತವೆ.
ಯುರೋಪಿಯನ್ ರೋಲರ್ ವಲಸೆ ಹಕ್ಕಿಯಾಗಿದೆ . ಪಾರಿವಾಳ ಗಾತ್ರದ (31cm) ಹಕ್ಕಿಯಾಗಿದೆ. ಹಸಿರು, ನೀಲಿ, ಚಿನ್ನದ ಬಣ್ಣಗಳಿಂದ ಕೂಡಿದೆ. ಕಾಮನಬಿಲ್ಲಿನಂತಹ ಹಕ್ಕಿ.ಉದ್ದ ಕೊಕ್ಕು ಹಕ್ಕಿಯಾಗಿದೆ.

ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago