Advertisement
ಅನುಕ್ರಮ

ಚಿಲಿಪಿಲಿ | ಕಿತ್ತಳೆ ತಲೆಯ ನೆಲ ಸಿಳ್ಳಾರ

Share

ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina  Latham

ಬಣ್ಣ ಬಣ್ಣದ  ಮುದ್ದಾದ ಚೆಂಡು ಉರುಳುವಂತೆ  ಅತ್ತ ಇತ್ತ ಚುರುಕಾಗಿ  ನೆಲದ ಮೇಲೆ  ಚಲಿಸುವ ಈ ಹಕ್ಕಿ ದಟ್ಟ ಕಾಡಿನ ತರಗೆಲೆಗಳ  ನಡುವೆ ಪುಟು ಪುಟುನೆ ಓಡಾಡಿಕೊಂಡಿರುತ್ತವೆ. ಬಣ್ಣ  ಬಣ್ಣದ ಹಕ್ಕಿಯೇ ಕಂದು ತಲೆ  ನೆಲ ಸಿಳ್ಳಾರ.  ಮೈನಾ  ಹಕ್ಕಿಯ( 21 cm) ಗಾತ್ರದ ಈ ಹಕ್ಕಿ  ಗುಂಡು ಗುಂಡಾಗಿದೆ.

ಹಕ್ಕಿಯ   ರೆಕ್ಕೆ ಬೆನ್ನು, ಬಾಲಗಳು ತೆಳು ನೀಲಿ ಬಣ್ಣದ್ದಾಗಿದೆ. ತಲೆ, ಎದೆ ಹಾಗೂ ಹೊಟ್ಟೆಯ ಭಾಗ ಕಿತ್ತಳೆ ಬಣ್ಣದಲ್ಲಿದೆ.. ಕುತ್ತಿಗೆ ಬೆಳ್ಳಗಿದ್ದು, ಕೆನ್ನೆಯ ಮೇಲೆ ಕರಿ ಪಟ್ಟೆಗಳಿವೆ, ಕಾಲುಗಳು ಉದ್ದವಾಗಿರುತ್ತದೆ. ಹೆಣ್ಣು  ಹಕ್ಕಿ    ತಿಳಿ ಹಸಿರು ಬಣ್ಣವಿರುತ್ತದೆ, ಕೊಕ್ಕು ಕೆಂಬಣ್ಣ. ಮಳೆಗಾಲ ಚಳಿಗಾಲದಲ್ಲಿ ತೀರಾ ಮೌನಿಯಾಗಿದ್ದು  ಗೂಡು ಕಟ್ಟುವ  ಜೂನ್  ಸಮಯದಲ್ಲಿ ಸುಮಧುರವಾಗಿ ಶಿಳ್ಳೆಯ ದನಿಯಲ್ಲಿ  ಹಾಡುತ್ತದೆ. ದನಿಯನ್ನು ಹಿಗ್ಗಿಸಿ ಕುಗ್ಗಿಸಿ  ಕೂಗುವ  ಪರಿ ಆಕರ್ಷಿಸದೆ ಇರದು.

Advertisement
ಪಟ್ಟೆ ನೆಲಗುಟುರಹಕ್ಕಿ, ಇದಕ್ಕಿರುವ ಇನ್ನೊಂದು ಹೆಸರು. ಹಿಮಾಲಯ, ತಮಿಳುನಾಡು ಪಶ್ಚಿಮ ಘಟ್ಟಗಳಲ್ಲಿ   ಹೆಚ್ಚಾಗಿ ಕಂಡು ಬರುತ್ತವೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ:  ಯು ರಾಧಾಕೃಷ್ಣ ರಾವ್ ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago