ಅನುಕ್ರಮ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

Advertisement
Advertisement

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

Advertisement

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…

4 minutes ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 minutes ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

1 hour ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

2 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

2 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

2 hours ago