ಅನುಕ್ರಮ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

Advertisement
Advertisement

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

Advertisement

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

2 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

2 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

4 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

4 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

4 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

9 hours ago