Advertisement
ಅಂಕಣ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

Advertisement
Advertisement

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

Advertisement

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

Advertisement

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

6 mins ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

39 mins ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

1 hour ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

1 hour ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

4 hours ago

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

18 hours ago