Advertisement
ಅನುಕ್ರಮ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 hour ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago